ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ತರಬೇತಿ ಕಾರ್ಯಕ್ರಮ ಮಂಗಳವಾರ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಸಂಯೋಜಕ ಷಣ್ಮುಖ ಹೆಗಡೆ, ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಭಟ್ಟ, ಉಪಾಧ್ಯಕ್ಷೆ ಗೌರಿ ಮಡಿವಾಳ, ಮುಖ್ಯಾಧ್ಯಾಪಕ ಭಾಸ್ಕರ ನಾಯ್ಕ, ಶಿಕ್ಷಕರಾದ ಇಂದಿರಾ ನಾಯಕ, ಪ್ರತಿಭಾ ಹೆಗಡೆ, ಅಮಿತ್ ಚೌಹಾಣ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಭಾಗವಹಿಸಿದ್ದರು.