ಶಿರಸಿ: ದಕ್ಷಿಣ ಭಾರತದ ಜಾಗೃತ ಶಕ್ತಿ ಪೀಠಗಳಲ್ಲಿ ಒಂದಾದ ಶಿರಸಿ ಮಾರಿಕಾಂಬೆ ಜಾತ್ರೆಯ ಮುಹೂರ್ತ ನಿಗದಿ ಮಾಡುವ ಕುರಿತು ಜ.7ರಂದು ಮಧ್ಯಾಹ್ನ 3 ಗಂಟೆಗೆ ದೇವಾಲಯದ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.
ಸರ್ಕಾರದ ಆದೇಶದಂತೆ ಕೊವಿಡ್ ನಿಯಮಾವಳಿ ಪ್ರಕಾರ ಸಭೆಗೆ ಧಾರ್ಮಿಕ ವಿಧಿ ವಿಧಾನ ನಡೆಸುವವರು ಮತ್ತು ಆಮಂತ್ರಿತರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.