• Slide
    Slide
    Slide
    previous arrow
    next arrow
  • ಅದಮ್ಯ ಚೇತನರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಹೆಬ್ಬಾರ್

    300x250 AD

    ಯಲ್ಲಾಪುರ: ರಾಜ್ಯಕಂಡ ಜನಪ್ರಿಯ ಮುಖ್ಯಮಂತ್ರಿ, ಧೀಮಂತ ನಾಯಕ ರಾಮಕೃಷ್ಣ ಹೆಗಡೆ ಅವರ ಪುಣ್ಯಸ್ಮರಣೆ ಹಾಗೂ ಭಾರತದ ಆಧ್ಯಾತ್ಮಿಕತೆಯ ಮೇರು ಪರ್ವತ ಸ್ವಾಮಿ ವಿವೇಕಾನಂದ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಅದಮ್ಯ ಚೇತನರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

    300x250 AD


    ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವರ್, ಯುವ ನಾಯಕರಾದ ವಿವೇಕ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ರವಿ ಭಟ್, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ಉದ್ಯಮಿಗಳಾದ ಬಾಲಕೃಷ್ಣ ನಾಯಕ ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top