Slide
Slide
Slide
previous arrow
next arrow

ಶ್ರೀನಿಕೇತನ ಶಾಲೆಯಲ್ಲಿ ರೇಬಿಸ್ ಮಾಹಿತಿ ಕಾರ್ಯಾಗಾರ

300x250 AD

ಶಿರಸಿ: ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ ಉತ್ತರಕನ್ನಡ , ತಾಲೂಕು ಪಂಚಾಯತ ಶಿರಸಿ ಹಾಗೂ ಪಶುಸಂಗೋಪನಾ ಇಲಾಖೆ, ಶಿರಸಿ ಇವರ ವತಿಯಿಂದ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರೇಬಿಸ್ ಮಾಹಿತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ವಿದ್ಯುಕ್ತವಾಗಿ ಆರಂಭಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಶುಸಂಗೋಪನಾ ಇಲಾಖೆ, ಶಿರಸಿಯ ಸಹಾಯಕ ನಿರ್ದೇಶಕರಾದ ಡಾ. ನಾಗರಾಜ ಸವಣೂರು ಕಾರ್ಯಾಗಾರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

300x250 AD

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶುಸಂಗೋಪನಾ ಇಲಾಖೆ, ಶಿರಸಿಯ ಸಂಶೋಧಕರಾದ ಡಾ. ಗಣೇಶ ಹೆಗಡೆ ರೇಬಿಸ್ ರೋಗದ ಲಕ್ಷಣ ಮತ್ತು ಅದನ್ನು ತಡೆಗಟ್ಟುವ ವಿಧಾನದ ಬಗ್ಗೆ ವಿಸ್ತೃತವಾಗಿ ವಿವರಿಸಿದರು. ವೇದಿಕೆಯಲ್ಲಿ ಪ್ರಾಚಾರ್ಯರಾದ ಶ್ರೀ ವಸಂತ ಭಟ್ಟ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top