
ಕುಮಟಾ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆಯೋಜಿಸಿದ್ದ ಜ್ಞಾನ ವಿಜ್ಞಾನ ಚಿಂತನ ಸತ್ರ ಸರಣಿಯ ಐದನೇ ವಿಚಾರ ಸಂಕಿರಣ ಹಾಗೂ ಸೇತುಬಂಧ-2021ರ ಸಮಾರೋಪ ಸಮಾರಂಭವು ಜು.11ರಂದು ಬೆಳಿಗ್ಗೆ 11.30 ಕ್ಕೆ ನಡೆಯಲಿದೆ.
ಝೂಮ್ ಮೀಟಿಂಗ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸುವರು. ಖ್ಯಾತ ಉದ್ಯಮಿ ಮತ್ತು ಸಮಾಜ ಸೇವಕ ಎಮ್.ಎಸ್.ನರಹರಿ ಸಾಧನೆಯಲ್ಲಿ ಸಂಪತ್ತಿದೆ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸುವರು ಎಂದು ವಿವಿವಿ ವಿದ್ಯಾ ಪರಿಷತ್ತಿನ ಉಪಾಧ್ಯಕ್ಷ ಮರುವಳ ನಾರಾಯಣ ಭಟ್ಟ ತಿಳಿಸಿದ್ದಾರೆ.
ಇನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ವಿವಿವಿ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಪರೀಕ್ಷಾ ತರಬೇತಿ ಕಾರ್ಯಕ್ರಮ ಸೇತುಬಂಧ-2021ರ ಸಮಾರೋಪವೂ ನಡೆಯಲಿದೆ. ವಿದ್ಯಾ ಪರಿಷತ್ತಿನ ಅಧ್ಯಕ್ಷ ಎಮ್.ಆರ್.ಹೆಗಡೆ, ಕಾರ್ಯದರ್ಶಿ ನೀಲಕಂಠ ಯಾಜಿ ಮತ್ತಿತರರು ಭಾಗವಹಿಸುವರು. ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಕ್ತ ಅವಕಾಶವಿದ್ದು, ಮೀಟಿಂಗ್ ಐಡಿ 08705338243. ಪಾಸ್ಕೋಡ್ 500024 ಎಂದು ಅವರು ವಿವರಿಸಿದ್ದಾರೆ.