ನವದೆಹಲಿ: ಇನ್ನು ಮುಂದೆ ಪ್ರತಿವರ್ಷ ಗಣರಾಜ್ಯೋತ್ಸವ ಆಚರಣೆಗಳು ಜನವರಿ 24 ರ ಬದಲಿಗೆ ಜನವರಿ 23 ರಿಂದ ಪ್ರಾರಂಭವಾಗಲಿದೆ.
ಭಾರತ ಸರ್ಕಾರದ ಮೂಲಗಳ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಆಚರಣೆಯಲ್ಲಿ ಸೇರಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ದೇಶದಾದ್ಯಂತ ಪರಾಕ್ರಮ್ ದಿವಸ್ ಎಂದು ಆಚರಿಸಲಾಗುತ್ತದೆ.
ಇದು ದೇಶದ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಆಚರಿಸುವ ಮತ್ತು ಸ್ಮರಿಸುವ ಮೋದಿ ಸರ್ಕಾರದ ಆಶಯಕ್ಕೆ ಅನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ಹಿಂದೆ, ಸರ್ಕಾರವು ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನವಾಗಿ ಮತ್ತು ಅಕ್ಟೋಬರ್ 31 ಸರ್ದಾರ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸುವ ನಿರ್ಧಾರಗಳನ್ನು ತೆಗೆದುಕೊಂಡಿತು. ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವಾದ ನವೆಂಬರ್ 15 ಅನ್ನು ಜನಜಾತೀಯ ಗೌರವ್ ದಿವಸ್ ಎಂದು ಆಚರಿಸುತ್ತಿದೆ.
ನವೆಂಬರ್ 26 ರಂದು ದೇಶಾದ್ಯಂತ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ ಮತ್ತು ನಾಲ್ವರು ವೀರರಿಗೆ ಗೌರವ ಸಲ್ಲಿಸಲು ಡಿಸೆಂಬರ್ 26 ರಂದು ವೀರ ಬಾಲ ದಿವಸ್ ಎಂದು ಸ್ಮರಿಸಲು ಮೋದಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.