ಕಾರವಾರ: ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರಧ್ವಜದ ಗೌರವವನ್ನು ಕಾಪಾಡಲು, ಉಚ್ಚನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಯಾವುದೇ ಕಾರಣಕ್ಕೂ ಎಲ್ಲಯೂ ಸಹ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರ ಧ್ವಜದ ಉತ್ಪಾಧನೆ ಮತ್ತು ಮಾರಾಟ ಮಾಡದಂತೆ ಕ್ರಮ ತೆಗೆದುಕೊಳ್ಳಬೇಕು. ಯಾರಾದರೂ ಒಮ್ಮೆ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುತ್ತಿದ್ದಲ್ಲಿ, ಧ್ವಜದ ಮಾಸ್ಕ ಧರಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇಂದು ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಶ್ರೀ ಕೃಷ್ಣಮೂರ್ತಿ ಎಚ್ ಕೆ ಅವರಿಗೆ ಮನವಿಯನ್ನು ನೀಡಿದರು.
ಈ ಸಂಧರ್ಭದಲ್ಲಿ ಶ್ರೀ ವಿನಾಯಕ ಸಾವಂತ್, ಶ್ರೀ ಉಲ್ಲಾಸ ಮುಂಜು ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಸಾಗರ ಕುರ್ಡೆಕರ, ಸೌ ಸುಷ್ಮಾ ಕುರ್ಡೆಕರ ಅವರು ಉಪಸ್ಥಿತರಿದ್ದರು.