ಕಾರವಾರ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಹಳಿಯಾಳದ ಶಾಸಕ ಆರ್.ವಿ.ದೇಶಪಾಂಡೆ ಮತ್ತು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸತೀಶ ಸೈಲ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸುವ ಪ್ರಸ್ತಾಪವನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅನುಮೋದಿಸಿದೆ ಹಾಗೂ ಅವರಿಗೆ ಆದಷ್ಟು ಬೇಗ ಮಾಹಿತಿ ನೀಡಿ ಜವಾಬ್ದಾರಿಗಳನ್ನು ಹಂಚುವಂತೆ ತಿಳಿಸಿದೆ.