ಶಿರಸಿ: ನಗರದ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.29 ರ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಪಟ್ಟಣ ಶಾಖೆಯ 11 ಕೆ.ವಿ ಮಾರ್ಗದ ಮರಾಠಿಕೊಪ್ಪ, ಲಯನ್ಸ್ನಗರ, ಗುರುನಗರ, ಕೊಪ್ಪಳ ಕಾಲೋನಿ, ಪ್ರಗತಿ ನಗರ, ವಿದ್ಯಾನಗರ, ಡಿಪೊ, ಬಸಟ್ಟಿಕೆರೆ, ಕಾಲೇಜು ರಸ್ತೆಪ್ರದೇಶಗಳಲ್ಲಿ, ಗ್ರಾಮೀಣ-1 ಶಾಖೆಯ ತಾರಗೋಡ 11 ಕೆ.ವಿ ಮಾರ್ಗದ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ-2 ಶಾಖೆಯ ಕೆಂಗ್ರೆ, ಮಾರಿಗದ್ದೆ, ದೇವನಳ್ಳಿ ಹಾಗೂ ಸಂಪಖಂಡ ಮಾರ್ಗದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿದ್ದಾರೆ.