Slide
Slide
Slide
previous arrow
next arrow

ಬಸ್ ಸ್ಕೂಟಿ ನಡುವೆ ಅಪಘಾತ;ಸವಾರರು ಪ್ರಾಣಾಪಾಯದಿಂದ ಪಾರು

300x250 AD

ಕಾರವಾರ: ಕೆ ಎಸ್‍ ಆರ್ ಟಿ ಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟಿ ಸವಾರ ಗಾಯಗೊಂಡ ಘಟನೆ ಇಂದು ನಗರದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.

ಸ್ಕೂಟಿಯಲ್ಲಿದ್ದ ಸವಾರರು ಮಾರುಕಟ್ಟೆಯಲ್ಲಿ ಹೂವು-ಹಣ್ಣು ಖರೀದಿಸಿ, ಬಳಿಕ ಬಸ್ ನಿಲ್ದಾಣದ ಮಾರ್ಗದಲ್ಲಿ ಅಜಾಗರೂಕತೆಯಿಂದ ಸ್ಕೂಟಿ ಚಲಾಯಿಸಿ, ಬಸ್ ನಿಲ್ದಾಣವನ್ನು ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನೆಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಸ್ಕೂಟಿ, ಬಸ್ ಟಾಯರ್ ಸಮೀಪ ಸಿಲುಕಿಕೊಂಡಿದ್ದು, ಸಂಪೂರ್ಣ ಜಖಂಗೊಂಡಿದೆ. ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಕೆಎಸ್‍ ಆರ್ ಟಿ ಸಿ ಬಸ್ ಭಟ್ಕಳದಿಂದ ಕಾರವಾರ ಮಾರ್ಗವಾಗಿ ವಾಸ್ಕೊಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.
ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಕೂಟಿ ಸವಾರರು ಮಾತುಕತೆ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಮಾಹಿತಿ ಲಭಿಸಿದೆ.

300x250 AD
Share This
300x250 AD
300x250 AD
300x250 AD
Back to top