• Slide
    Slide
    Slide
    previous arrow
    next arrow
  • ಉಪ್ಪೋಣಿ ಪಿಯು ಕಾಲೇಜಿನ ಕಂಪ್ಯೂಟರ್ ಲ್ಯಾಬ್‍ ಉದ್ಘಾಟಿಸಿದ ಆರ್.ಎಸ್. ರಾಯ್ಕರ್

    300x250 AD

    ಹೊನ್ನಾವರ: ತಾಲೂಕಿನ ಉಪ್ಪೋಣಿ ಶಾರದಾಂಬ ಪಿಯು ಕಾಲೇಜಿನ ಕಂಪ್ಯೂಟರ್ ಲ್ಯಾಬ್‍ನ್ನು ಸಂಸ್ಥೆಯ ಅಧ್ಯಕ್ಷ ಆರ್.ಎಸ್. ರಾಯ್ಕರ್ ಉದ್ಘಾಟಿಸಿದರು.

    ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಲು ಈ ಸಂಸ್ಥೆಯು ಬಹುಮುಖ್ಯ ಕೊಡುಗೆ ನೀಡಿದೆ. ಇಂದು ಕಂಪ್ಯೂಟರ್ ಜ್ಞಾನ ತೀರಾ ಅಗತ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಈ ಸಂಸ್ಥೆ ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದೆoದು ಸೇವೆ ಆರಂಭಗೊಳಿಸಲಾಗಿದೆ. ಇದರ ಸದುಪಯೋಗವನ್ನು ಈ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಹೇಳಿದರು. ಶೈಕ್ಷಣಿಕ ಸಂಸ್ಥೆಯು ಜನಮನ್ನಣೆ ಪಡೆಯಲು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಕಡಿಮೆ ಅವಧಿಯಲ್ಲಿ ಇಂತಹ ಜನಪ್ರೀಯತೆ ಪಡೆಯಲು ನುರಿತ ಉಪನ್ಯಾಸಕರು ಹಾಗೂ ಉತ್ತಮ ವಿದ್ಯಾರ್ಥಿಗಳಿಂದ ಸಾಧ್ಯವಾಗಿದೆ. ಮುಂದಿನ ದಿನದಲ್ಲಿ ಇನ್ನು ಹೆಚ್ಚಿನ ಸಾಧನೆಯು ಸಂಸ್ಥೆ ಮಾಡಲಿ ಅದಕ್ಕೆ ಆಡಳಿತ ಮಂಡಳಿಯ ಸಹಕಾರ ಸದಾ ಕಾಲ ಇರಲಿದೆ ಎಂದು ಶುಭಹಾರೈಸಿದರು.

    ಉಪಾಧ್ಯಕ್ಷ ಉಲ್ಲಾಸ ನಾಯ್ಕ ಮಾತನಾಡಿ ಶೈಕ್ಷಣಿಕವಾಗಿ ಸಾಧನೆ ಮಾಡಲು ಈ ಸೌಲಭ್ಯ ಇನ್ನಷ್ಟು ಪರಿಣಾಮಕಾರಿಯಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.

    300x250 AD

    ವೇದಿಕೆಯಲ್ಲಿ ಸಮಾಜ ಸೇವಕ ಕರೀಂ ತಲಕಣಿ, ಉರ್ದು ಅಭಿವೃದ್ದಿ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಸಾಬ್, ಉಪಾಧ್ಯಕ್ಷ ಜೆಪ್ರಿ ಅಹಮ್ಮದ್ ದಾವುದ್, ಕಾರ್ಯದರ್ಶಿ ಇಪ್ತಿಕಾರ್ ತಲಕಣಿ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಜಿ.ಹೆಗಡೆ, ಸಂಸ್ಥೆಯ ದಾನಿ ಬಾವಫಕೀ ಮಸ್ತಾನ್, ಯಾಸಿನ್ ಯಾಜಿ, ಅಜಾದ್ ಹೊನ್ನಾವರ, ಅಲ್ಲಾವುದ್ದೀನ್, ಅಹಮ್ಮದ್ ಮೊಕ್ತೆಸರ್, ಶಾರದಾಂಬ ಪ್ರೌಡಶಾಲೆಯ ಮುಖ್ಯೋಪಧ್ಯಾಯರಾದ ಜೆ.ಎಂ.ಮುಕ್ರಿ, ಸ್ಥಳಿಯರಾದ ಮುಜಾಮಿಲ್ ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top