• Slide
    Slide
    Slide
    previous arrow
    next arrow
  • 2022 – 23ರ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿ ಬಜೆಟ್

    300x250 AD

    ಬೆಂಗಳೂರು: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2022 – 23 ನೇ ಸಾಲಿನ ಬಜೆಟ್ ಸಭೆಯನ್ನು ನಡೆಸಿದರು.

    ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇದುವರೆಗೆ 28,94,389 ಕಾರ್ಮಿಕರು ನೋಂದಣಿಯಾಗಿದ್ದಾರೆ ಮಂಡಳಿಯಿಂದ ಕಾರ್ಮಿಕ ಕಲ್ಯಾಣಕ್ಕಾಗಿ ಒಟ್ಟು 19 ವಿವಿಧ ಯೋಜನೆಗಳನ್ನು ನೀಡಲಾಗುತ್ತಿದೆ ಈ ಬಾರಿಯ ಆಯವ್ಯಯದಲ್ಲಿ ಹೆಚ್ಚಿನ ಫಲಾನುಭವಿಗಳ ಗುರಿಯನ್ನು ಹೊಂದಲಾಗಿದೆ ಎಂದರು.

    ಈ ಬಾರಿಗೆ ಬಜೆಟ್ ನಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವ – ಉದ್ಯೋಗವನ್ನು ಕೈಗೊಳ್ಳುವ ದೃಷ್ಟಿಯಿಂದ ಹೊಲಿಗೆ ಯಂತ್ರ ನೀಡುವ ವಿನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ ಈ ಯೋಜನೆಗೆ 15 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಹಾಗೂ ತಾತ್ಕಾಲಿಕ ವಸತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತಾರಿಸುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು.

    300x250 AD

    ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿರಾದ ಗುರುಪ್ರಸಾದ, ಮಂಡಳಿಯ ಸದಸ್ಯರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top