• Slide
    Slide
    Slide
    previous arrow
    next arrow
  • ಸಿದ್ದಿ ಜನಾಂಗದ ಮಕ್ಕಳ ಪ್ರತಿಭೆ ಗುರುತಿಸಿ ತರಬೇತಿ ನೀಡಿ ಯಶಸ್ವಿ; ಸಚಿವ ನಾರಾಯಣಗೌಡ

    300x250 AD

    ಬೆಂಗಳೂರು: ಪದಕ ಗೆಲ್ಲುವ ಪ್ರತಿಭೆ, ಸಾಮರ್ಥ್ಯವಿದ್ದರೂ ಸೂಕ್ತ ವೇದಿಕೆ ಇಲ್ಲದೇ ಎಲೆಮರೆ ಕಾಯಿಯಂತಿದ್ದ ಸಿದ್ದಿ ಜನಾಂಗದ ಮಕ್ಕಳನ್ನು ಗುರುತಿಸಿ ತರಬೇತಿ ನೀಡುತ್ತಿರುವುದು ಫಲ ನೀಡುತ್ತಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

    ಪಾಂಡಿಚೆರಿಯಲ್ಲಿ ನಡೆದ 3 ನೇ ಜಯನ್ ಬಾಕ್ಸಿಂಗ್ ಫೆಸ್ಟಿವಲ್ 2022ರಲ್ಲಿ ಸಿದ್ದಿ ಜನಾಂಗದ ಕ್ರೀಡಾಪಟುಗಳು ಏಳು ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

    ಆರ್. ಜಯನ್ ಬಾಕ್ಸಿಂಗ್ ಫೆಸ್ಟಿವಲ್ ವಲ್‌ನಲ್ಲಿ ವಿದ್ಯಾನಗರದ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿ ಪಡೆಯುತ್ತಿರುವ ಸಿದ್ದಿ ಜನಾಂಗದ ‌8 ಕ್ರೀಡಾಪಟುಗಳು ಭಾಗವಹಿಸಿದ್ದರು.‌ ಈ ಪೈಕಿ ಏಳು ಕ್ರೀಡಾಪಟುಗಳು ಚಿನ್ನ, ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ.
    ಜೋಸೆಫ್ ಬಸ್ತಾವೋನಾ (Elite 71-75 ಕೆಜಿ ವಿಭಾಗ), ಸ್ಟೀವನ್ ಸಂಜನ್ ಸಲಗಟ್ಟಿ (youth 54-57 ಕೆಜಿ ವಿಭಾಗ) ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ವಿಜೇತರಾಗಿದ್ದಾರೆ.

    300x250 AD

    ವಿದ್ಯಾನಗರ ಕ್ರೀಡಾ ವಸತಿ ಶಾಲೆಯ ಜೋಸೆಫ್ ಬಸ್ತಾವೊನಾ ಅವರು ಬೆಸ್ಟ್ ಬಾಕ್ಸರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

    ಸಿದ್ದಿ ಜನಾಂಗದ ಮಕ್ಕಳಿಗೆ ವಿಶೇಷ ಸಾಮರ್ಥ್ಯವಿದೆ. ಅದರೆ ಅವರಿಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ, ಸಿದ್ದಿ ಜನಾಂಗದದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ. ಅತ್ಯಂತ ಕಡಿಮೆ ಅವಧಿಯಲ್ಲಿಯೇ ಉತ್ತಮ ತರಬೇತಿ ಪಡೆದು ಪಾಂಡಿಚೇರಿಯಲ್ಲಿ ನಡೆದ ಬಾಕ್ಸಿಂಗ್ ಟೂರ್ನಮೆಂಟ್‌‌ನಲ್ಲಿ ಉತ್ತಮ ಪ್ರದರ್ಶನ ನೀಡಿ 8 ಕ್ರೀಡಾಪಟುಗಳ ಪೈಕಿ ಏಳು ಮಂದಿ ಪದಕ ಗೆದ್ದಿದ್ದಾರೆ. ಇದು ಆರಂಭ ಅಷ್ಟೇ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ, ಹಲವು ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿದ್ದಾರೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top