
ಶಿರಸಿ: ನಗರದ ಮಹತ್ವಾಕಾಂಕ್ಷೆಯ ಯೋಜನೆಯಾದ, 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಕೆಂಗ್ರೇನಾಲಾ ಜಲಮೂಲದ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಣೆಗೊಳಿಸುವ ಕಾಮಗಾರಿಗೆ ಶಿರಸಿ-ಸಿದ್ದಾಪುರ ಶಾಸಕ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಂಕು ಸ್ಥಾಪನೆ ಮಾಡುವ ಮೂಲಕ ಚಾಲನೆ ನೀಡಿದರು.
ಗುಣಮಟ್ಟವಾಗಿ ಹಾಗೂ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಎನ್ಡಬ್ಲೂಕೆಎಸ್ಆರ್ಟಿಸಿ ಅಧ್ಯಕ್ಷ ವಿ.ಎಸ್.ಪಾಟೀಲ್ ಉಪಸ್ಥಿತರಿದ್ದರು.