• Slide
    Slide
    Slide
    previous arrow
    next arrow
  • ವೀರ ಯೋಧ ಕುಟುಂಬದವರ ಬೇಡಿಕೆ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ;ಸಿಎಂ ಬೊಮ್ಮಾಯಿ

    300x250 AD

    ಚಿತ್ರದುರ್ಗ: ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರ ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ನಡೆಯಿತು.

    ದೇಶಕ್ಕಾಗಿ ಹೋರಾಡಿ ವೀರ ಮರಣ ಹೊಂದಿದ ಸೈನಿಕರ ಪತ್ನಿಯರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿತ್ತು. ಸೈನಿಕರು ವೀರ ಮರಣ ಹೊಂದಿದ ಬಗ್ಗೆ ಸಭೆಯಲ್ಲಿ ವಿವರಣೆ ನೀಡಲಾಗುತ್ತಿತ್ತು.

    ವೀರ ಮರಣ ಹೊಂದಿದ ಸೈನಿಕರ ಪತ್ನಿಯರಿಗೆ ಶ್ರೀಮಠದಿಂದ ಸನ್ಮಾನಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭಾವುಕರಾದರು. ವೀರಮರಣ ಹೊಂದಿದ ಸೈನಿಕರ ಪತ್ನಿಯರಿಗೆ ಸಿರಿಗೆರೆ ತರಳುಬಾಳು ಬೃಹನ್ಮಠದಿಂದ ಸನ್ಮಾನ ಮಾಡಲಾಯಿತು. ತಲಾ ರೂ.50 ಸಾವಿರ ರೂಪಾಯಿಗಳಂತೆ ಒಟ್ಟು ಒಂಭತ್ತು ಕುಟುಂಬಗಳಿಗೆ ಶ್ರೀಮಠದ ವತಿಯಿಂದ ಚೆಕ್ ವಿತರಿಸಲಾಯಿತು.

    300x250 AD

    ಈ ಸಂದರ್ಭದಲ್ಲಿ ವೀರ ಮರಣ ಹೊಂದಿದ ಸೈನಿಕರ ಪತ್ನಿಯರು ಕುಂದುಕೊರತೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಿರಿಗೆರೆ ಶ್ರೀಗಳಿಗೆ ನೀಡಿದರು. ಈ ಮನವಿ ಪತ್ರವನ್ನು ಸಿರಿಗೆರೆ ಶ್ರೀಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.

    ಈ ಮನವಿಗಳನ್ನು ಸ್ವೀಕರಿಸಿದಾಗ ಸಿಎಂ ಕಣ್ಣಂಚಿನಲ್ಲಿ ನೀರು ಕಂಡು ಬಂತು. ನಂತರ ಆ ಮನವಿಗಳನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗೆ ನೀಡಿ ಸಮಸ್ಯೆ ಬಗೆ ಹರಿಸುವಂತೆ ಸೂಚಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top