• Slide
    Slide
    Slide
    previous arrow
    next arrow
  • ರಾಜ್ಯದ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ; ಸಿಎಮ್ ಬೆಂಬಲಕ್ಕೆ ಸಚಿವ ಹೆಬ್ಬಾರ್ ಸಾಥ್

    300x250 AD

    ಯಲ್ಲಾಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ‌.

    ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು‌, ರಾಜ್ಯದ ಮುಖ್ಯಮಂತ್ರಿ ಸ್ಥಾನ ಈಗ ಖಾಲಿ ಇಲ್ಲ. ಯಡಿಯೂರಪ್ಪನವರೇ ಆ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ‌. ಈ ಕುರಿತಾಗಿ ಬಿಜೆಪಿ ಪಕ್ಷದ ರಾಜ್ಯ ಹೈಕಮಾಂಡ್, ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಹೈಕಮಾಂಡ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಕೂಡ ಇದನ್ನು ಹತ್ತಾರು ಬಾರಿ ಸ್ಪಷ್ಟಪಡಿಸಿದ್ದಾರೆ. ನಾವು ಸಚಿವರುಗಳು ಅನೇಕರು ಕೂಡ ಈ ಮಾತನ್ನು ದೃಢಪಡಿಸಿದ್ದೇವೆ ಎಂದರು.

    300x250 AD

    ಇನ್ನು ಎರಡು ವರ್ಷ ಈ ಅವಧಿ ಮುಗಿಯುವವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಬಹಳ ಕಷ್ಟದ ಕಾಲದಲ್ಲಿ ಹಾಗು ಸಂಕೀರ್ಣ ಪರಿಸ್ಥಿತಿಯಲ್ಲಿಯೂ ಕೂಡ ಯಡಿಯೂರಪ್ಪನವರು ಸಮರ್ಥವಾಗಿ ಕಾರ್ಯ ನಿಭಾಯಿಸಿದ್ದಾರೆ. ಆದುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಬದಲಾವಣೆಗಳಿಲ್ಲ ಎಂದು ಹೆಬ್ಬಾರ್ ಸಿ ಎಮ್ ಬೆನ್ನಿಗೆ ನಿಂತಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top