• Slide
    Slide
    Slide
    previous arrow
    next arrow
  • ಅರಣ್ಯವಾಸಿ ಸಮಸ್ಯೆಗಳ ಕುರಿತು ಸರಕಾರದ ಗಮನ ಸೆಳೆಯುತ್ತೇನೆ; ಮಾಜಿ ಸಿಎಂ ಸಿದ್ಧರಾಮಯ್ಯ

    300x250 AD

    ಶಿರಸಿ: ಅರಣ್ಯವಾಸಿಗಳ ಪರ ಸಂಘಟಿಸಿದ 30 ವರ್ಷದ ಹೋರಾಟ ಶ್ರೇಷ್ಠ ಮಟ್ಟದ್ದು. ಭೂಮಿ ಹಕ್ಕು ಅರಣ್ಯವಾಸಿಗಳಿಗೆ ಅವಶ್ಯ. ವಿಧಾನಸಭಾ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸರಕಾರದ ಗಮನ ಸೆಳೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ , ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದರು.

    ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಫೆ. 22 ರಂದು ಬೆಂಗಳೂರಿನ ವಿಧಾನ ಸೌಧದ ವಿರೋಧ ಪಕ್ಷದ ನಾಯಕರ ಕಛೇರಿಯಲ್ಲಿ ಭೆಟ್ಟಿಯಾಗಿ 30 ವರ್ಷ ಅರಣ್ಯ ಭೂಮಿ ಹೋರಾಟ ಸ್ಮರಣ ಸಂಚಿಕೆ ಅರ್ಪಿಸಿದ ಸಂದರ್ಭದಲ್ಲಿ ನುಡಿದರು.

    ಕಾನೂನು ಬಂದರೂ, ಅರಣ್ಯವಾಸಿಗಳು ಹಕ್ಕಿನಿಂದ ವಂಚಿತರಾಗುತ್ತಿರುವ ಕುರಿತು ಚಿಂತನೆ ಆಗಬೇಕಾಗಿರುವದು ಗಮನಾರ್ಹ ಅಂಶ ಎಂದು ಹೇಳಿದರು.

    300x250 AD

    ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್ ವಿ ದೇಶಪಾಂಡೆ, ಜಿಲ್ಲಾ ಸಂಚಾಲಕರಾದ ಜಿ ಎಮ್ ಶೆಟ್ಟಿ ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top