• Slide
    Slide
    Slide
    previous arrow
    next arrow
  • ಅರಬ್ಬೀ ಸಮುದ್ರದಲ್ಲಿ ಅಲೆಯಬ್ಬರಕ್ಕೆ ಮಗುಚಿದ ದೋಣಿ; 10ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

    300x250 AD

    ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಯ ರಭಸಕ್ಕೆ ಸಿಲುಕಿದ್ದ 10ಕ್ಕೂ ಹೆಚ್ಚು ಮೀನುಗಾರರನ್ನು ಭಟ್ಕಳ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ರಕ್ಷಿಸಲಾಗಿದೆ.
    ಅಬ್ಬರದ ಮಳೆಯಿಂದಾಗಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಲು ನಿರ್ಬಂಧವಿದ್ದರೂ, ಮೀನುಗಾರರು ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ. ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಸಹಿತ ಅಬ್ಬರದ ಮಳೆಯಾಗಿದ್ದರಿಂದ ಮೀನುಗಾರರು ಅಲೆಯ ರಭಸಕ್ಕೆ ವಾಪಸ್ ಬರಲಾಗದೆ ತೊಂದರೆ ಗೊಳಗಾಗಿದ್ದರು. ಇನ್ನು ಹಲವು ಪಾತಿ ದೋಣಿಗಳು ಅಲೆಯ ಹೊಡೆತಕ್ಕೆ ಪಲ್ಟಿಯಾಗಿವೆ. ತಕ್ಷಣ ದಡದಲ್ಲಿದ್ದ ಸ್ಥಳೀಯ ಮೀನುಗಾರರು ಇದನ್ನು ಗಮನಿಸಿ ಗಿಲ್ಲೆಟ್ ದೋಣಿ ಮೂಲಕ ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಮೀನುಗಾರರು ಭಟ್ಕಳದ ಮುಂಡಳ್ಳಿ, ಬೆಳ್ಳಿ ಭಾಗದವರಾಗಿದ್ದಾರೆ ಎಂದು ಹೇಳಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top