ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಫೆ.25 ರ ಶುಕ್ರವಾರ ಮುಂಜಾನೆ 10 ಗಂಟೆಗೆ ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಫೆ. 28 ರಂದು ಕುಮಟದಲ್ಲಿ ಉದ್ಘಾಟನೆಗೊಳ್ಳಲಿರುವ ಅರಣ್ಯವಾಸಿಗಳನ್ನು ಉಳಿಸಿ “ಜಾಥ” ಹಾಗೂ ಬೆಂಗಳೂರಿನಲ್ಲಿ ಸಚಿವರ ಉಪಸ್ಥಿತಿಯಲ್ಲಿ ಜರುಗಿದ ಉನ್ನತ ಮಟ್ಟದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಮಾಹಿತಿಯನ್ನು ಸಭೆಯಲ್ಲಿ ನೀಡಲಾಗುವುದು.
ಆಸಕ್ತ ಅರಣ್ಯವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದ್ದಾರೆ.