ಹೊನ್ನಾವರ: ಅರಣ್ಯವಾಸಿಗಳಲ್ಲಿ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಅರಣ್ಯವಾಸಿಗಳನ್ನು ಉಳಿಸಿ- ಜಾಥ ಮಾ.೫ ರಂದು ಶನಿವಾರ ಹೊನ್ನಾವರದಲ್ಲಿ ನಡೆಯಲಿದೆ ಎಂದು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಹೊನ್ನಾವರ ಸರ್ಕಲ್ನಿಂದ ಜಾಥ ಉದ್ಘಾಟನೆಗೊಂಡು ನಂತರ ನಗರದ ಪ್ರಮುಖ ಬಿದಿಗಳಲ್ಲಿ ಜಾಥ ಸಂಚರಿಸಿ 11:30 ಕ್ಕೆ ಪ್ರಭಾತ ನಗರದ ಮೂಡಗಣಪತಿ ದೇವಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ.
ಆಸಕ್ತ ಅರಣ್ಯವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಪ್ರಕಟಣೆ ತಿಳಿಸಿದೆ.