ಭಟ್ಕಳ:ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ತೀರ್ಪಿನ ವಿರುದ್ಧ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟನ್ನು ಬಲವಂತವಾಗಿ ಬಂದ್ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ.
ತೈಮುರ್ ಹಸ್ಸನ್ ಗವಾಯಿ, ಶಾರೀಕ್ ಅನೀಸ್ ಪನ್ ಸೋಪ್ತಕರ್, ಶಾಹುಲ್ ಹಮೀದ್ ಗವಾಯಿ, ಅಜೀಮ್ ಅಹ್ಮದ್ ಮೊಹ್ಮದ ಅರಿಫ್, ಮೋಹಿದ್ದೀನ್ ಅಬೀರ್ ಅಬುಮೊಹ್ಮದ ಆರೋಪಿತರಾಗಿದ್ದಾರೆ.
ಹೈಕೋರ್ಟ್ ಹಿಜಾಬ್ ನಿಷೇಧದ ಅರ್ಜಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ ಭಟ್ಕಳದಲ್ಲಿ ಯಾವುದೇ ಅನುಮತಿ ಇಲ್ಲದೆ ಗಲಾಟೆ ಎಬ್ಬಿಸುವ ಉದ್ದೇಶದಿಂದ ಹೈಕೋರ್ಟ್ ತೀರ್ಪಿನ ಬಗ್ಗೆ ಯಾವುದೇ ರೀತಿಯ ಪ್ರತಿಭಟನೆ, ಸಾರ್ವಜನಿಕ ಮೆರವಣಿಗೆ ,ಸಭೆ ಸಮಾರಂಭ ನಡೆಸುವುದನ್ನು ನಿಷೇದವಿದ್ದರೂ, ಭಟ್ಕಳ ಹಳೆ ಬಸ್ ನಿಲ್ದಾಣದ ಸಮೀಪ ಬಲವಂತವಾಗಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಉದ್ದೇಶ ಪೂರಕವಾಗಿ ಉಲ್ಲಂಘನೆ ಮಾಡಲಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.