ಶಿರಸಿ: ಇಲ್ಲಿನ ತೋಟಗಾರ್ಸ್ ಕೋ-ಆಪರೇಟಿವ ಸೇಲ್ ಸೊಸೈಟಿಯ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಸೂಪರ್ ಮಾರ್ಕೆಟ್ ಆವರಣದಲ್ಲಿ ಸಂಘದ ರೈತ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಬೇವು-ಬೆಲ್ಲ ಹಂಚುವ ಮೂಲಕ ಶುಭಕೃತ್ ಸಂವತ್ಸರದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶುಭಕೃತ್ ಸಂವತ್ಸರವು ಎಲ್ಲರಿಗೂ ಒಳ್ಳೆಯದನ್ನುಂಟು ಮಾಡಲಿ. ಹೊಸ ವರ್ಷದಲ್ಲಿ ಸಮಸ್ತ ಜನತೆಗೆ ಶಾಂತಿ ಸುಖ ನೆಮ್ಮದಿ ದೊರೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ಸಹಕಾರಿಗಳಾದ ಭಾಸ್ಕರ ಹೆಗಡೆ ಕಾಗೇರಿ, ಸಂಘದ ಪ್ರಧಾನ ವ್ಯವಸ್ಥಾಪಕ ರವೀಶ ಹೆಗಡೆ, ಸಂಘದ ಸದಸ್ಯರು, ಗ್ರಾಹಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.