• Slide
    Slide
    Slide
    previous arrow
    next arrow
  • ಅರಣ್ಯವಾಸಿಗಳ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುವುದೇ ಜಾಥಾ ಉದ್ದೇಶ- ರವೀಂದ್ರ ನಾಯ್ಕ್

    300x250 AD

    ಕುಮಟ: ಹೊನ್ನಾವರದಲ್ಲಿ ಮೇ 7ರಂದು ಜರುಗಲಿರುವ ‘ಅರಣ್ಯವಾಸಿಗಳನ್ನ ಉಳಿಸಿ’ ರ‍್ಯಾಲಿಗೆ ಕುಮಟಾ ತಾಲೂಕಿನಿಂದ ಮೂರು ಸಾವಿರಕ್ಕಿಂತ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸಲು ತೀರ್ಮಾನಿಸಲಾಯಿತು.


    ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಕುಮಟಾ ತಾಲೂಕಿನ ಮಹಾಸತಿ ದೇವಾಲಯದ ಸಭಾಂಗಣದಲ್ಲಿ ಜರುಗಿದ ಅರಣ್ಯ ಅತಿಕ್ರಮಣ ಸಭೆಯಲ್ಲಿ ತೀರ್ಮಾನಿಸಿ, ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ಸರಕಾರ ಮೇ 30 ರ ಒಳಗೆ ಪ್ರಮಾಣ ಪತ್ರ ಸಲ್ಲಿಸುವದು ಹಾಗೂ ಶರಾವತಿ ಅಭಯಾರಣ್ಯ ಪ್ರದೇಶ ವಿಸ್ತರಿಸಿರುವುದರಿಂದ ಉತ್ತರ ಕನ್ನಡ ಜಿಲ್ಲೆಗೂ ಉಂಟಾದ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಉದ್ದೇಶದಿಂದ ಮೇ 7 ರಂದು ಹೊನ್ನಾವರದಲ್ಲಿ ‘ಅರಣ್ಯವಾಸಿಗಳನ್ನ ಉಳಿಸಿ’- ಬೃಹತ್ ಜಾಥ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

    ತಾಲೂಕ ಅಧ್ಯಕ್ಷ ಮಂಜುನಾಥ ಮರಾಠಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಪಟಗಾರ ಹೆಗಡೆ, ಶಂಕರ ಗೌಡ ಕಂದಳ್ಳಿ, ಸುರೇಶ ಭಟ್ಟ ನಾಗೂರು, ಸಾರಾಬಿ ಬೆಟ್ಕುಳಿ, ಶಾಂತಿ ಮುಕ್ರಿ ಮಿರ್ಜಾನ, ಖೈರುನ್ನಿಸಾ ಕಿಮಾನಿ, ಮಹೇಂದ್ರ ನಾಯ್ಕ ಕತಗಾಲ, ಸೀತಾರಾಮ ನಾಯ್ಕ ಬೊಗ್ರಿಬೈಲ್, ಗಜಾನನ ಪಟಗಾರ ಹೆಗಡೆ, ಯಾಕೂಬಸಾಬ ಬೆಟ್ಕುಳಿ, ಶಾಂತಿ ಆಗೇರ್ ಮೊರಬಾ, ಜೋನ್ ಮಿರ್ಜಾನ, ಸುಮಿತ್ರಾ ಗೊಂಡ ಬರ್ಗಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    300x250 AD

    ಪ್ರಕರಣ ಹಿಂದಕ್ಕೆ ಒತ್ತಾಯ :
    ಅರಣ್ಯ ಸಿಬ್ಬಂದಿಗಳು ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅರಣ್ಯವಾಸಿಗಳ ಮೇಲೆ ದಾಖಲಿಸಿದ ಕ್ರಿಮಿನಲ್ ಪ್ರಕರಣವನ್ನ ಹಿಂದಕ್ಕೆ ಪಡೆಯಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಈ ಸಂದರ್ಭದಲ್ಲಿ ಸರಕಾರಕ್ಕೆ ಅಗ್ರಹಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top