ಹೊನ್ನಾವರ: ತಾಲೂಕಿನ ಹಳದೀಪುರ ಅಗ್ರಹಾರದ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅಗ್ರಹಾರದ ನಿವಾಸಿ ಮಹೇಶ್ ರಾಮದಾಸ್ ಹಳದಿಪುರ (67) ಮೃತಪಟ್ಟವರು ಎಂದು ತಿಳಿದುಬಂದಿದೆ. ಹೊನ್ನಾವರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರಿನ ಚಾಲಕನ ಅಜಾಗರೂಕತೆ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದ್ದು,ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.