• Slide
    Slide
    Slide
    previous arrow
    next arrow
  • ಅಕ್ರಮ ಕೆಂಪುಕಲ್ಲು ಕ್ವಾರಿಗಳ ಮೇಲೆ ತಹಶೀಲ್ದಾರ ದಾಳಿ

    300x250 AD

    ಭಟ್ಕಳ:ತಾಲೂಕಿನ ಮುಟ್ಟಳ್ಳಿ ಗ್ರಾಮದ ಸರ್ವೆ ನಂ. 220ರಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಡಾ.ಸುಮಂತ್ ಬಿ.ಇ. ಅವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಯನ್ನು ತಡೆದು, ಅವರು ಬಳಸುತ್ತಿದ್ದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಯಾವುದೇ ಪರವಾನಿಗೆಯಿಲ್ಲದೇ ತಾಲೂಕಿನ ಮಾವಳ್ಳಿ-2 ಗ್ರಾಮದ ಸ.ನಂ. 740/1ರ ಮಾಲ್ಕಿ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರು ಬಂದಿದ್ದು, ಅಲ್ಲಿಯೂ ಕೂಡಾ ಕೆಂಪು ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಟಿಲ್ಲರ್ ಯಂತ್ರವನ್ನು ಜಪ್ತಿ ಮಾಡಿ ಮುರ್ಡೇಶ್ವರ ಠಾಣೆಗೆ ಒಪ್ಪಿಸಲಾಗಿದೆ.

    300x250 AD

    ತಹಸೀಲ್ದಾರ್ ಡಾ.ಸುಮಂತ್ ಬಿ.ಇ. ಅವರೊಂದಿಗೆ ಮಾವಳ್ಳಿ ಕಂದಾಯ ನಿರೀಕ್ಷಕ ಶ್ರೀನಿವಾಸ ಮಾಸ್ತಿ, ಗ್ರಾಮ ಲೆಕ್ಕಾಧಿಕಾರಿ ಚರಣ ಗೌಡ ಹಾಗೂ ಗ್ರಾಮ ಸಹಾಯಕರು ಇದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top