ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯ ನಿಮಿತ್ತ ಜಮಾತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಶಿರಸಿಯ ಗಾಂಧಿನಗರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಜೇಶ್ವರಿ ಹೆಗಡೆ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ ಎಂದು ಸೀರತ್ ಸ್ಪರ್ಧೆಯ ಸಂಚಾಲಕ ಎಂ.ಆರ್.ಮಾನ್ವಿ ತಿಳಿಸಿದ್ದಾರೆ.
ಭಟ್ಕಳದ ಪ್ರಾಥಮಿಕ ಶಾಲಾ ಶಿಕ್ಷಕ ರಾಘವೇಂದ್ರ ಮಡಿವಾಳ ದ್ವಿತೀಯ, ಗೋಕರ್ಣದ ಸಂಗೀತಾ ಶೆಟ್ಟಿ ತೃತೀಯಾ ಬಹುಮಾನ ಪಡೆದುಕೊಂಡಿದ್ದಾರೆ. ಮೇ 18ರಂದು ಸಂಜೆ 5 ಗಂಟೆಗೆ ಭಟ್ಕಳದ ಅನ್ಫಾಲ್ ಹೈಪರ್ ಮಾರ್ಕೆಟ್ ಬಳಿಯ ಆಮೀನಾ ಪ್ಯಾಲೆಸ್ನಲ್ಲಿ ನಡೆಯುವ ‘ಹಿಂದೂ- ಮುಸ್ಲಿಮ್ ಸೌಹಾರ್ದ ಸಂಜೆ- 2022’ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.
ಶಿರಸಿಯ ವಿದ್ಯಾಧರ್ ಶಾನು ಮಧುಕರ್, ಭಟ್ಕಳದ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿಖಿತಾ ಮೊಗೇರ್, ಭಟ್ಕಳದ ಶ್ರೀಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿಗಳಾದ ಆಶಾ ಶಿರಿಲ್ ಡಿಸೋಜಾ, ಸ್ವಾತಿ ಖಾರ್ವಿ ಹಾಗೂ ಸಿದ್ದಾಪುರದ ವಸೀಮಾ ಬಾನು ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ.