ಶಿರಸಿ: ತಾಲ್ಲೂಕಿನ ಈಸಳೂರ ಬಳಿ ಸಾರಿಗೆ ಬಸ್ ಹಾಗೂ ಬೈಕಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ನಡೆದಿದೆ.
ಶಿರಸಿಯಿಂದ ಹಾವೇರಿ ಕಡೆ ಹೋಗುತ್ತಿದ್ದ ಬಸ್ ಹಾಗೂ ಹಾವೇರಿ ಕಡೆಯಿಂದ ಶಿರಸಿ ಕಡೆ ಹೋಗುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ರಾಘವೇಂದ್ರಕುಮಾರ ಕಿಳ್ಳಿಕ್ಯಾತರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಈತನನ್ನ ಮೊದಲು ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.