• Slide
    Slide
    Slide
    previous arrow
    next arrow
  • ಮನ್ ಕಿ ಬಾತ್ ನಲ್ಲಿ ಮೋದಿ ಮನವಿ: ಚಾರ್ ಧಾಮ್ ಯಾತ್ರಾ ಮಾರ್ಗದಲ್ಲಿ ಸ್ವಚ್ಛತಾ ಕಾರ್ಯ

    300x250 AD

    ನವದೆಹಲಿ: ‘ಚಾರ್ ಧಾಮ್ ಯಾತ್ರೆ’ ಮಾರ್ಗದಲ್ಲಿ ತ್ಯಾಜ್ಯ ಎಸೆಯಲಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರವಾಸಿಗರು, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಕೇದಾರನಾಥ ಧಾಮದ ಬಳಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಿವೆ.

    “ತ್ಯಾಜ್ಯ ನಿರ್ವಹಣೆಯ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುವುದು” ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಹೇಳಿದ್ದಾರೆ.

    ಚಾರ್ ಧಾಮ್ ಯಾತ್ರೆಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಯಾತ್ರಾರ್ಥಿಗಳು ಆಗಮಿಸುತ್ತಿದ್ದು, ಈ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಕಸದ ರಾಶಿಗಳು ರಾಶಿ ಬಿದ್ದಿವೆ.

    ಚಾರ್ ಧಾಮ್ ಯಾತ್ರೆಯ ಮಾರ್ಗದಲ್ಲಿ ಕಸದ ರಾಶಿಯನ್ನು ಗಮನಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಮ್ಮ ಮಾಸಿಕ ರೇಡಿಯೋ ಪ್ರಸಾರವಾದ ‘ಮನ್ ಕಿ ಬಾತ್’ ನಲ್ಲಿ ಕೇದಾರನಾಥ ದೇವಾಲಯದ ಪ್ರದೇಶಗಳಲ್ಲಿ ಕಸದ ರಾಶಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿರಿಸಿಕೊಳ್ಳುವಂತೆ ಜನರನ್ನು ಒತ್ತಾಯಿಸಿದರು.

    300x250 AD

    ಮೋದಿ ಮನವಿ ಬಳಿಕ ಸ್ವಚ್ಛ ಭಾರತ ಅಭಿಯಾನದ ತಂಡದೊಂದಿಗೆ ಅನೇಕ ಸಂಸ್ಥೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಸ್ವಚ್ಛತಾ ಕಾರ್ಯವನ್ನು ಈ ಪ್ರದೇಶದಲ್ಲಿ ಮಾಡುತ್ತಿವೆ ಎಂದು ಅವರು ಹೇಳಿದ್ದಾರೆ

    ಕೃಪೆ- news13.in

    Share This
    300x250 AD
    300x250 AD
    300x250 AD
    Leaderboard Ad
    Back to top