• Slide
    Slide
    Slide
    previous arrow
    next arrow
  • ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

    300x250 AD

    ಭಟ್ಕಳ: ತಾಲೂಕಿನ ಹೆಬಳೆ ಗ್ರಾಮ ಪಂಚಾಯತ ವ್ಯಾಪ್ತಿಯ ಸ.ನಂ.410 ರ ಪೈಕಿ ಕ್ಷೇತ್ರ 10 ಗುಂಟೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡುವುದನ್ನು ನಿಲ್ಲಿಸಿ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಹೆಬಳೆ ಗ್ರಾಮಸ್ಥರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಯಿಂದ ಈ ಭಾಗದ ಮನೆಗಳ ಬಾವಿಗಳು ಕಲುಷಿತಗೊಳ್ಳಲಿವೆ. ಇದರಿಂದ ಮನೆಯಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದವರಿಗೆ ನೀರಿಗಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ. ಮೊದಲೇ ಮಳೆಗಾಲ ಆರಂಭಗೊಂಡಿದೆ. ಮಳೆಯ ನೀರಿನಿಂದ ಅನೇಕಾನೇಕ ಸಮಸ್ಯೆಗಳು ಎದುರಾಗಲಿದ್ದು, ಈ ಮಧ್ಯೆ ಇಲ್ಲಿಯೇ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿದ್ದಲ್ಲಿ ಜನರು ಬದುಕು ಸಾಗಿಸುವುದೇ ದುಸ್ತರವಾಗಲಿದೆ. ಆದ್ದರಿಂದ ನಮ್ಮ ವ್ಯಾಪ್ತಿಯಲ್ಲಿ ನೀರಿನ ಹಾಗೂ ಪರಿಸರ ಮಾಲಿನ್ಯವಾಗುವ ಲಕ್ಷಣಗಳಿದ್ದು, ಸದ್ಯ ನಿಗದಿ ಮಾಡಿದ ತ್ಯಾಜ್ಯ ವಿಲೇವಾರಿ ಘಟಕವನ್ನು ಬೇರೆಡೆ ಸ್ಥಳಾಂತರಿಸುವಂತೆ ಮನವಿ ಮಾಡಿ ಆಗ್ರಹಿಸಿದರು.

    300x250 AD

    ಈ ಸಂದರ್ಭದಲ್ಲಿ ಸ್ಥಳೀಯರಾದ ಅಪ್ರೀನ್, ರುಕ್ಸರ್ ಮುಂತಾದವರು ಇದ್ದರು

    Share This
    300x250 AD
    300x250 AD
    300x250 AD
    Leaderboard Ad
    Back to top