• Slide
    Slide
    Slide
    previous arrow
    next arrow
  • ದೌರ್ಜನ್ಯ ಮುಂದುವರೆಸಿದರೆ ಅರಣ್ಯ ಸಿಬ್ಬಂದಿಗಳ ವಿರುದ್ಧ ತೀವ್ರ ಹೋರಾಟ- ರವೀಂದ್ರ ನಾಯ್ಕ್ ಖಡಕ್ ಎಚ್ಚರಿಕೆ

    300x250 AD

    ಶಿರಸಿ: ಕೇಂದ್ರ ಸರಕಾರದ ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ರಾಜ್ಯ ಸರಕಾರವು ವೈಫಲ್ಯವಾಗಿದ್ದು, ಅರಣ್ಯವಾಸಿಗಳ ಪರವಾಗಿ ರಾಜ್ಯ ಸರಕಾರಗಳು ಗಂಭೀರವಾಗಿ ಚಿಂತಿಸಬೇಕು. ಇಲ್ಲದಿದ್ದರೇ, ಉತ್ತರ ಕನ್ನಡ ಜಿಲ್ಲೆಯು ನಿರಾಶ್ರಿತ ಜಿಲ್ಲೆಯಾಗಬಹುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

    ಅವರು ಇಂದು ಅರಣ್ಯವಾಸಿಗಳನ್ನ ಉಳಿಸಿ- ಜಾಥದ ಕಾರ್ಯಕ್ರಮದ ಅಂಗವಾಗಿ ಶಿರಸಿ ತಾಲೂಕಿನ, ಬಂಕನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಕಂಡ್ರಾಂಜಿಯಲ್ಲಿನ ಮಾರುತಿ ದೇವಾಲಯದ ಆವರಣದಲ್ಲಿ ಜರುಗಿದ ಅರಣ್ಯವಾಸಿಗಳ ಸಭೆಯನ್ನು ಉದ್ಧೇಶಿಸಿ ಮಾನತಾಡಿದರು.

    ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿದ್ದು, ರಾಜ್ಯ ಸರಕಾರವು ಸುಫ್ರೀಂ ಕೋರ್ಟನಲ್ಲಿ ಪರಿಪೂರ್ಣವಾಗಿ ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸದೇ ಇದ್ದಲ್ಲಿ, ಸುಫ್ರೀಂ ಕೋರ್ಟನಿಂದ ಅನಧೀಕೃತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಲು ಆದೇಶವಾಗುವುದು. ಈ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಪರವಾಗಿ ರಾಜ್ಯ ಸರಕಾರವು ಇಚ್ಛಾಶಕ್ತಿ ವ್ಯಕ್ತಪಡಿಸಬೇಕೆಂದು ಅವರು ಹೇಳಿದರು.

    300x250 AD

    ಅರಣ್ಯಾಧಿಕಾರಿಗಳ ದೌರ್ಜನ್ಯ :
    ತಾಂತ್ರಿಕ ದೋಷದ ಅಡಿಯಲ್ಲಿ ಜಿಪಿಎಸ್ ಅಸಮರ್ಪಕ ಅಳತೆಯ ಮಾನದಂಡದ ಅಡಿಯಲ್ಲಿ ಅರಣ್ಯ ಸಿಬ್ಬಂದಿಗಳು ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಆತಂಕ ಮಾಡುತ್ತಿರುವುದು ಖಂಡನಾರ್ಹ. ಅರಣ್ಯ ಸಿಬ್ಬಂದಿಗಳು ಕಾನೂನು ಬಾಹಿರ ಕೃತ್ಯ ಮುಂದುವರೆಸಿದ್ದಲ್ಲಿ ಅರಣ್ಯ ಸಿಬ್ಬಂದಿಗಳ ವಿರುದ್ಧ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ರವೀಂದ್ರ ನಾಯ್ಕ ಹೇಳಿದರು.

    ಸಭೆಯ ಅಧ್ಯಕ್ಷತೆಯನ್ನು ಹಿರಿಯ ಹೋರಾಟಗಾರರಾದ ಎಮ್ ಆರ್ ನಾಯ್ಕ ಕಂಡ್ರಾಜಿ ಅವರು ವಹಿಸಿದ್ದರು. ಸಭೆಯನ್ನು ಉದ್ಧೇಶಿಸಿ ವಕೀಲ ಮಹೇಶ್ ನಾಯ್ಕ, ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಹೇಶ್ ನಾಯ್ಕ, ನೆಹರೂ ನಾಯ್ಕ ಬಿಳೂರು ಮಾತನಾಡಿದರು. ಸಭೆಯಲ್ಲಿ ರವಿ ನಾಯ್ಕ ಮುಟ್ಟಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಪ್ಪ ಗೌಡ, ಎಮ್ ಕೆ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತ ಮತ್ತು ವಂದನಾರ್ಪಣೆಯನ್ನು ಗ್ರಾಮ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಚಂದ್ರು ನಾಯ್ಕ ಮಾಡಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top