Slide
Slide
Slide
previous arrow
next arrow

‘ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್’ ಘೋಷಣೆ ಸಾಬೀತುಗೊಂಡಿದೆ-ದ್ರೌಪದಿ ಮುರ್ಮು

300x250 AD

ನವದೆಹಲಿ: ದ್ರೌಪದಿ ಮುರ್ಮು ಮಂಗಳವಾರ ಆಡಳಿತಾರೂಢ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿರುವ ಅವರು, ” ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬುಡಕಟ್ಟು ಮಹಿಳೆಯನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಬಿಜೆಪಿಯ “ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್” ಎಂಬ ಘೋಷಣೆಯನ್ನು ಸಾಬೀತುಪಡಿಸಿದೆ” ಎಂದು ಹೇಳಿದ್ದಾರೆ.

ಬುಡಕಟ್ಟು ನಾಯಕಿ ಮತ್ತು ಜಾರ್ಖಂಡ್ ರಾಜ್ಯಪಾಲೆ ಮುರ್ಮು ಅವರು ಎನ್‌ಡಿಎಯಿಂದ ಉನ್ನತ ಹುದ್ದೆಗೆ ನಾಮನಿರ್ದೇಶನಗೊಂಡಿದ್ದಾರೆ ಎಂದು ದೂರದರ್ಶನದ ಮೂಲಕ ತಿಳಿದುಕೊಂಡಾಗ ಆಶ್ಚರ್ಯ ಮತ್ತು ಸಂತೋಷವಾಯಿತು ಎಂದು ಮುರ್ಮು ಸಂತೋಷ ವ್ಯಕ್ತಪಡಿಸಿದ್ದಾರೆ.

“ನನಗೆ ಆಶ್ಚರ್ಯ ಮತ್ತು ಸಂತೋಷವಾಗಿದೆ. ದೂರದ ಮಯೂರ್‌ಭಂಜ್ ಜಿಲ್ಲೆಯ ಬುಡಕಟ್ಟು ಮಹಿಳೆಯಾಗಿ, ನಾನು ಉನ್ನತ ಹುದ್ದೆಗೆ ಅಭ್ಯರ್ಥಿಯಾಗುವ ಬಗ್ಗೆ ಎಂದೂ ಯೋಚಿಸಿರಲಿಲ್ಲ” ಎಂದು ಮುರ್ಮು ಒಡಿಶಾದ ರಾಯ್ರಂಗ್‌ಪುರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಶೇಕಡಾ 2.8 ಕ್ಕಿಂತ ಹೆಚ್ಚು ಮತಗಳನ್ನು ಹೊಂದಿರುವ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ)ದ ಬೆಂಬಲವನ್ನು ಪಡೆಯಬಹುದೇ ಎಂದು ಕೇಳಿದಾಗ, ಮುರ್ಮು ಅವರು “ಒಡಿಶಾದ ಎಲ್ಲಾ ಸದಸ್ಯರ ಬೆಂಬಲದ ಆಶಾವಾದವನ್ನು ಹೊಂದಿದ್ದೇನೆ” ಎಂದು ಹೇಳಿದರು.

“ನಾನು ಮಣ್ಣಿನ ಮಗಳು, ಒಡಿಶಾದವಳಾಗಿ ನನ್ನನ್ನು ಬೆಂಬಲಿಸುವಂತೆ ಎಲ್ಲ ಸದಸ್ಯರಲ್ಲಿ ವಿನಂತಿಸುವ ಹಕ್ಕು ನನಗಿದೆ” ಎಂದರು.

300x250 AD

ದ್ರೌಪದಿ ಮುರ್ಮು ಮಹಾನ್ ರಾಷ್ಟ್ರಪತಿಯಾಗುತ್ತಾರೆ ಇಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಎಂದು ಘೋಷಿಸಿದ ನಂತರ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಜೀವನದಲ್ಲಿ ಕಷ್ಟಗಳನ್ನು ಎದುರಿಸಿದ ಲಕ್ಷಾಂತರ ಜನರು ಮುರ್ಮು ಅವರ ಜೀವನದಿಂದ ಶಕ್ತಿಯನ್ನು ಪಡೆದುಕೊಂಡಿದ್ದಾರೆ ಮತ್ತು ಅವರು ಮಹಾನ್ ರಾಷ್ಟ್ರಪತಿಯಾಗುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೃಪೆ-news13.in

Share This
300x250 AD
300x250 AD
300x250 AD
Back to top