ಅಂಕೋಲಾ:ಪತಂಜಲಿ ಯೋಗ ಸಮಿತಿ- ಭಾರತ ಸ್ವಾಭಿಮಾನ್ ಟ್ರಸ್ಟ್, ಪತಂಜಲಿ ಮಹಿಳಾ ಸಮಿತಿ ಸಂಯುಕ್ತ ಆಶ್ರಯದಲ್ಲಿ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ‘ಮನುಕುಲದ ಒಳಿತಿಗಾಗಿ ಯೋಗದ ಪಾತ್ರ’ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಭಾವಿಕೇರಿ ಸೆಕೆಂಡರಿ ಸ್ಕೂಲ್ನ ವಿದ್ಯಾರ್ಥಿನಿ ಅನುಷಾ ನಾಯಕ ಪ್ರಥಮ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಅನುಷಾ ಪ್ರಥಮ
