• Slide
    Slide
    Slide
    previous arrow
    next arrow
  • ‘ಹಣತೆ’ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ರಚನೆ

    300x250 AD

    ದಾಂಡೇಲಿ: ಹಣತೆ ಸಾಹಿತ್ಯಕ ಸಾಂಸ್ಕೃತಿಕ ಜಗಲಿ- ಉತ್ತರ ಕನ್ನಡ ಇದರ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ರಚನೆಯಾಗಿದ್ದು, ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅವರ ಅನುಮೋದನೆಯೊಂದಿಗೆ ಸಮಿತಿಯ ಯಾದಿಯನ್ನು ತಾಲೂಕಾಧ್ಯಕ್ಷ ರಾಘವೇಂದ್ರ ವಿ.ಗಡೆಪ್ಪನವರ್ ಅವರು ಬಿಡುಗಡೆ ಮಾಡಿದ್ದಾರೆ.

    ಹಣತೆ ದಾಂಡೇಲಿ ಘಟಕದ ಅಧ್ಯಕ್ಷರಾಗಿ ವಕೀಲ ರಾಘವೇಂದ್ರ ವಿ.ಗಡೆಪ್ಪನವರ್, ಗೌರವ ಕಾರ್ಯದರ್ಶಿಗಳಾಗಿ ಶಿಕ್ಷಣ ಸಂಯೋಜಕ ಅಬ್ದುಲ್ಲ ರೆಹಮಾನ್, ಕನ್ನಡಪರ ಹೋರಾಟಗಾರ ಮಂಜುನಾಥ ಪಂತೋಜಿ, ಗೌರವ ಕೋಶಾಧ್ಯಕ್ಷರಾಗಿ ವಕೀಲರಾದ ಜಯಾ ಡಿ.ನಾಯ್ಕ ನೇಮಕಗೊಂಡಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಶ್ರೀಶೈಲ ಮಾದಣ್ಣನವರ್, ನಿವೃತ್ತ ಪ್ರಾಂಶುಪಾಲ ಡಾ.ಪಿ.ವಿ.ಶಾನಭಾಗ್, ಸಾಮಾಜಿಕ ಹೋರಾಟಗಾರ ಅಕ್ರಂ ಖಾನ್, ಯಕ್ಷಗಾನ ಕಲಾವಿದ ವಿಷ್ಣುಮೂರ್ತಿ ರಾವ್, ವಕೀಲರಾದ ರೂಪ ಕೇರವಾಡರ, ಕವಿ ಸೋಮಶೇಖರ್ ಅಂದಕಾರ, ಐಟಿಐ ಕಾಲೇಜು ಪ್ರಾಂಶುಪಾಲ ನಾಗೇಶ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ,

    300x250 AD

    ರಾಘವೇಂದ್ರ ಗಡೆಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಕಾರ್ಯಕಾರಿ ಸಮಿತಿ ರಚನಾ ಸಮಿತಿ ಸಭೆಯಲ್ಲಿ ಹಣತೆ ಜಿಲ್ಲಾ ಪ್ರಧಾನ ಸಂಚಾಲಕ ಎನ್.ಜಯಚಂದ್ರನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಉಪೇಂದ್ರ ಘೋರ್ಪಡೆ ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top