• Slide
    Slide
    Slide
    previous arrow
    next arrow
  • ಧಾರಾಕಾರವಾಗಿ ಸುರಿಯುತ್ತಿರುವ ಮಳೆ:ವಿವಿಧೆಡೆ ಹಾನಿ

    300x250 AD

    ಹೊನ್ನಾವರ: ತಾಲೂಕಿನಲ್ಲಿ ಬುಧವಾರ ರಾತ್ರಿಯಿಂದ ಧಾರಾಕಾವಾಗಿ ಮಳೆ ಸುರಿಯುತ್ತಿದ್ದು, ವಿವಿಧೆಡೆ ಹಾನಿ ಸಂಭವಿಸಿದೆ.

    ಕರ್ಕಿ ಗ್ರಾಮದ ರಾಮಚಂದ್ರ ನಾಯ್ಕ ಇವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿ ಸಂಭವಿಸಿದೆ. ಚಿತ್ತಾರ ಪಂಚಾಯತಿ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ಕೆಲ ಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಗೇರುಸೊಪ್ಪಾ ಖರ್ವಾ ರಾಷ್ಟ್ರೀಯ ಹೆದ್ದಾರಿಯ ಖರ್ವಾ ಕ್ರಾಸ್ ಬಳಿ ಗುಡ್ಡ ಕುಸಿತವಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

    ಪಟ್ಟಣ ವ್ಯಾಪ್ತಿಯ ಸಫ್ರಿ ಸೆಂಟರ್ ಬಳಿ ಚರಂಡಿಯಲ್ಲಿ ನೀರು ತುಂಬಿ ಸಮೀಪದ ತೋಟ ಹಾಗೂ ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿತ್ತು. ಸಮಸ್ಯೆ ಗಮನಕ್ಕೆ ಬಂದ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ರಸ್ತೆಯಲ್ಲಿ ಬಿದ್ದ ಮರ ಹಾಗೂ ಮಣ್ಣುಗಳನ್ನು ತೆರವು ಮಾಡಿದ್ದು, ಮನೆ ಹಾನಿ ಪ್ರದೇಶದ ಪಂಚನಾಮೆ ನಡೆಸಲಾಗಿದೆ.

    300x250 AD

    ಮಳೆ ಹಾನಿ ಅಥವಾ ಇತರೆ ಸಮಸ್ಯೆಗಳು ಉಂಟಾದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಗ್ರಾಮೀಣ ಭಾಗದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಟ್ಟಣ ವ್ಯಾಪ್ತಿಯಲ್ಲಿ ಮೂಖ್ಯಾಧಿಕಾರಿಗಳ ಗಮನಕ್ಕೆ ತರುವಂತೆ ತಹಶೀಲ್ದಾರ ನಾಗರಾಜ ನಾಯ್ಕಡ್ ಮಾಹಿತಿ ನೀಡಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top