• Slide
    Slide
    Slide
    previous arrow
    next arrow
  • ವಿವಿಧ ಇಲಾಖೆಯ ಅಧಿಕಾರಿಗಳ ವರ್ಗಾವಣೆ

    300x250 AD

    ಕಾರವಾರ: ರಾಜ್ಯ ಸರ್ಕಾರ ಶುಕ್ರವಾರ ವಿವಿಧ ಇಲಾಖೆಯ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ.ಶರದ್ ನಾಯಕ್ ಅವರನ್ನ ಜೊಯಿಡಾ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈಧ್ಯಾಧಿಕಾರಿಯಾಗಿದ್ದ ಡಾ.ಗಣೇಶ ಟಿ.ಎಚ್ ಅವರನ್ನ ವರ್ಗಾಯಿಸಲಾಗಿದೆ.

    ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶರಾಗಿ ಕಳೆದ ಎರಡು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಎಂ.ಸೋಮಶೇಖರ್ ಅವರನ್ನ ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಕೆಲ ದಿನದ ಹಿಂದೆ ಬೆಂಗಳೂರು ಕಚೇರಿಗೆ ಸೋಮಶೇಖರ್ ಅವರನ್ನ ವರ್ಗಾಯಿಸಲಾಗಿತ್ತು. ಆದರೆ ಇಲಾಖೆಯ ವರ್ಗಾವಣೆ ಆದೇಶವನ್ನ ತಡೆ ಹಿಡಿದು ಇದೀಗ ಬಾಗಲಕೋಟೆ ಉಪನಿರ್ದೇಶಕರಾಗಿ ವರ್ಗಾಯಿಸಿ ಆದೇಶಿಸಲಾಗಿದೆ.

    300x250 AD

    ಶಿರಸಿ ತಾಲೂಕಿನ ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹರಮ್ ಸುಲ್ತಾನ್ ಅವರನ್ನು ಭಟ್ಕಳ ಬೆಳ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top