• Slide
    Slide
    Slide
    previous arrow
    next arrow
  • ಶ್ರೀ ಕ್ಷೇತ್ರ ಗಾಣಗಾಪುರದಲ್ಲಿ ಕರ್ಕಿ ಮಠ ಪೀಠಾಧೀಶರ ಚಾತುರ್ಮಾಸ್ಯ ವ್ರತ

    300x250 AD

    ಹೊನ್ನಾವರ: ತಾಲೂಕಿನ ಕರ್ಕಿಯ ಶ್ರೀ ಜ್ಞಾನೇಶ್ವರೀ ಮಠದ ಪೀಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮಿಗಳ 37ನೇ ಚಾತುರ್ಮಾಸ್ಯ ವ್ರತ ಆಶಾಢ ಪೂರ್ಣಿಮೆ( ಗುರುಪೂರ್ಣಿಮೆ)ಯ ಜುಲೈ 13ರಿಂದ ಶ್ರೀ ದತ್ತಾತ್ರೇಯ ಕ್ಷೇತ್ರವಾದ ಭೀಮಾ ಅಮರಜಾ ಸಂಗಮವಾದ ಶ್ರೀ ಕ್ಷೇತ್ರ ಗಾಣಗಾಪುರದಲ್ಲಿ ನಡೆಯಲಿದೆ.
    ಗಾಣಗಾಪುರದ ಸಂಗಮ ರಸ್ತೆಯಲ್ಲಿರುವ ಜಗದ್ಗುರು ಶ್ರೀ ಶಂಕರಾಚಾರ್ಯರ ಮಠದಲ್ಲಿ ಆಶಾಢ ಪೂರ್ಣಿಮೆಯಿಂದ ಭಾದ್ರಪದ ಪೂರ್ಣಿಮೆ ದಿನವಾದ ಸೆಪ್ಟೆಂಬರ್‌ 10ರ ವರೆಗೆ 2ತಿಂಗಳ ಕಾಲ ನಡೆಯಲಿದೆ ಎಂದು ತಿಳಿಸಲಾಗಿದೆ. ಈ ಚಾತುರ್ಮಾಸ್ಯ ವ್ರತದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top