Slide
Slide
Slide
previous arrow
next arrow

ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕಗ್ಗೊಲೆ

300x250 AD

ಹುಬ್ಬಳ್ಳಿ: ದೇಶದ ಖ್ಯಾತ ವಾಸ್ತು ತಜ್ಞ, ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಹುಬ್ಬಳ್ಳಿಯ ಹೋಟೆಲ್ ನಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಈ ದುರಂತ ಸಂಭವಿಸಿದ್ದು, ಹೋಟೆಲ್ ನ ರಿಸೆಪ್ಷನ್ ನಲ್ಲಿಯೇ ಚಂದ್ರಶೇಖರ್ ಗುರೂಜಿಯವರನ್ನು ಕೊಲೆ ಮಾಡಲಾಗಿದೆ.

300x250 AD

ಹೊಟೆಲ್ ಗೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿಯವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿ ಗುರೂಜಿಯವರ ಕಾಲಿಗೆ ಬಿದ್ದು ನಮಸ್ಕರಿಸುವ ನೆಪದಲ್ಲಿ ಬಾಗಿದ್ದಾನೆ. ತಕ್ಷಣ ಎದ್ದು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಮಧ್ಯಾಹ್ನ 12.23 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top