• Slide
    Slide
    Slide
    previous arrow
    next arrow
  • ಬಸ್ ನಿಲ್ದಾಣಕ್ಕೆ ಸಚಿವ ಹೆಬ್ಬಾರ್ ದಿಢೀರ್ ಭೇಟಿ: ಸ್ವಚ್ಛತಾ ಪರಿಶೀಲನೆ

    300x250 AD

    ಯಲ್ಲಾಪುರ: ಪಟ್ಟಣದ ಬಸ್ ನಿಲ್ದಾಣಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಸ್ವಚ್ಛತೆ ನಿರ್ವಹಣೆ ಸರಿಯಾಗಿ ಮಾಡದ ಕಾರಣ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
    ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ನಿರ್ಲಕ್ಷ್ಯ ಮಾಡುತ್ತಿರುವ ಬಗೆಗೆ ಸಾರ್ವಜನಿಕರು ದೂರಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ದಿಢೀರ್ ಭೇಟಿ ನೀಡಿದರು. ಎಲ್ಲೆಡೆ ಕಸ, ತ್ಯಾಜ್ಯ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಲ್ದಾಣ ಆವಾರದ ಶೌಚಗೃಹದಲ್ಲೂ ಸ್ವಚ್ಛತೆ ನಿರ್ವಹಣೆ ಸರಿಯಾಗದ ಕಾರಣ ಏಜೆನ್ಸಿಯ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
    ಸ್ವಚ್ಛತೆ ನಿರ್ವಹಣೆ ಸರಿಯಾಗಿ ಮಾಡದೇ ಇದ್ದರೆ ಸಹಿಸುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಪ.ಪಂ ಮಾಜಿ ಅಧ್ಯಕ್ಷ ಶಿರೀಷ ಪ್ರಭು, ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ತಾ.ಪಂ ಮಾಜಿ ಅಧ್ಯಕ್ಷ ರವಿ ಕೈಟ್ಕರ್ ಹಾಗೂ ಅಧಿಕಾರಿಗಳು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top