Slide
Slide
Slide
previous arrow
next arrow

ಕಾನೂನು ಬಾಹಿರ ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರಿಯೆ ಸ್ಥಗಿತಗೊಳಿಸಲು ಆಗ್ರಹ

300x250 AD

ಶಿರಸಿ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರಿಯೆ ನಾಮನಿರ್ದೇಶನ, ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಆಗ್ರಹಿಸುವಿಕೆಗೆ ಸಂಬಂಧಿಸಿ ಅತಿಕ್ರಮಣದಾರರಿಗೆ ವಿಚಾರಣೆಗೆ ನೀಡುವ ತಿಳುವಳಿಕೆ ಪತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತಕ್ಷಣ ಕಾನೂನು ಬಾಹಿರ ಮಂಜೂರಿ ಪ್ರಕ್ರಿಯೆ ಸ್ಥಗಿತಗೊಳಿಸಲು ಆಗ್ರಹಿಸಲಾಯಿತು.

ಶಿರಸಿಯ ಉಪವಿಭಾಗಾಧಿಕಾರಿ ದೇವರಾಜ್ ಆರ್ ಅವರಿಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಮನವಿ ನೀಡಲಾಯಿತು.

ಅರಣ್ಯ ಹಕ್ಕು ಕಾಯಿದೆಗೆ ವ್ಯತಿರಿಕ್ತವಾಗಿ, ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿ ಹಾಗೂ ಮೂರು ತಲೆಮಾರಿನ ಪರ್ವದಿಂದ ದೃಢೀಕೃತ ಮತ್ತು ವಾಸಮಾಡುವ ಭೂಮಿಯ ಕಬ್ಜಾ ಹೊಂದಿರುವ ವೈಯಕ್ತಿಕ ದಾಖಲೆ ಹಾಜರುಪಡಿಸಲು ಕಾನೂನಿಗೆ ವ್ಯತಿರಿಕ್ತವಾಗಿ, ಕಾನೂನು ಮತ್ತು ಸರಕಾರದ ಆದೇಶದಲ್ಲಿ ಉಪವಿಭಾಗ ಸಮಿತಿ ಅರಣ್ಯ ಅತಿಕ್ರಮಣದಾರರಿಗೆ ವಿಚಾರಣೆ ನೋಟೀಸ್ ನೀಡುತ್ತಿರುವುದು ಆಕ್ಷೇಪಾರ್ಹ ಕಾರ್ಯವಾಗಿದೆ. ತಕ್ಷಣ ಕಾನೂನು ವ್ಯತಿರಿಕ್ತವಾಗಿ ಅರಣ್ಯ ಅತೀಕ್ರಮಣದಾರರ ಪುನರ್ ಪರಿಶೀಲನೆ ಅರ್ಜಿ ವಿಚಾರಣೆಗೆ ಒಳಪಡುತ್ತಿರುವುದನ್ನು ಆಕ್ಷೇಪಿಸಲಾಯಿತು.

ಪಾರಂಪರಿಕ ಅರಣ್ಯವಾಸಿಗಳು ಅರ್ಜಿ ಮಂಜೂರಿಗೆ ಸಂಬಂಧಿಸಿ ನಿರ್ದಿಷ್ಟವಾದ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂಬ ಅಂಶ ಕಾನೂನಿನಲ್ಲಿ ಉಲ್ಲೇಖವಿದ್ದಾಗಲೂ ದಾಖಲೆಗಳಿಗೆ ಒತ್ತಾಯಿಸುವದು ಸರಿಯಿಲ್ಲ. ಅಲ್ಲದೇ, ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರದ ಪರಿಸರವು 3 ತಲೆಮಾರಿನ ಜನವಸತಿ ಪ್ರದೇಶವೆಂದು ಪುರಾವೆ ಮಾಡಿದರೆ ಸಾಕು ಎಂಬ ಕೇಂದ್ರ ಬುಡಕಟ್ಟು ಮಂತ್ರಾಲಯ ನೀಡಿದ ಆದೇಶವನ್ನು ಜಿಲ್ಲಾಡಳಿತ ನಿರ್ಲಕ್ಷಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸದ್ರಿ ಆದೇಶವನ್ನು ಪರಿಗಣಿಸತಕ್ಕದೆಂದು ಉಪವಿಭಾಗಾಧಿಕಾರಿಗಳಿಗೆ ಉಲ್ಲೇಖಿಸಲಾಯಿತು.

300x250 AD

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಎಸ್ ಆರ್ ಭಟ್ಟ, ಎಸಿಎಫ್ ರಘು, ಉಪಸ್ಥಿತರಿದ್ದರು.

ನಿಯೋಗದಲ್ಲಿ ತಾಲೂಕ ಅಧ್ಯಕ್ಷ ಲಕ್ಷ್ಮಣ ಮಾಳ್ಳಕ್ಕನವರ, ಚಂದ್ರು ನಾಯ್ಕ ಕಂಡ್ರಾಜಿ, ನರಸಿಹ ನಾಯ್ಕ ಮಂಚಿಕೇರಿ, ಶಿವಾನಂದ ನಾಯ್ಕ ಕಂಡ್ರಾಜಿ, ಗಜಾನನ ಮರಾಠಿ, ಬಾಬು ಮರಾಠಿ, ಸಾವಿತ್ರಿ ಹೆಗಡೆ, ರಾಮು ಚುಡಿಯಾ ಮರಾಠಿ, ಸುರೇಶ ನಾಯ್ಕ ಕಂಡ್ರಾಜಿ ಮುಂತಾದವರು ಉಪಸ್ಥಿತರಿದ್ದರು

ಸದಸ್ಯರಿಲ್ಲದೇ, ಮಂಜೂರಿ ಪ್ರಕ್ರಿಯೆ : ಅರಣ್ಯ ಹಕ್ಕು ಸಮಿತಿಯಲ್ಲಿ ಮೂರು ನಾಮನಿರ್ದೇಶನ ಸದಸ್ಯರನ್ನ ಒಳಗೊಂಡ ಒಟ್ಟು ಆರು ಸದಸ್ಯರು ಇರಬೇಕೆಂಬ ಅಂಶವನ್ನ ಪರಿಗಣನೆಗೆ ತೆಗೆದುಕೊಳ್ಳದೇ, ಕೇವಲ ಅಧಿಕಾರ ವರ್ಗದವರ ಸದಸ್ಯರ ಉಪಸ್ಥಿತಿಯಲ್ಲಿ ಅರಣ್ಯ ಅತಿಕ್ರಮಣದಾರರಿಗೆ ತಿಳುವಳಿಕೆ ಪತ್ರ ನೀಡಿ ದೃಢೀಕರಣ ದಾಖಲೆಗಳನ್ನ ಹಾಜರುಪಡಿಸಲು ಒತ್ತಾಯಿಸುವುದು ಹಾಗೂ ನಿಗದಿಪಡಿಸಿದ ದಿನಾಂಕದಂದು ಅತಿಕ್ರಮಣದಾರರು ಹಾಜರಾಗದೆ ಇದ್ದಲ್ಲಿ ನಿಯಮಾನುಸಾರ ಪ್ರಕರಣ ಮುಂದುವರೆಸಲಾಗುವುದೆಂದು ತಿಳುವಳಿಕೆ ಪತ್ರದಲ್ಲಿ ಪ್ರಸ್ತಾಪಿಸಿರುವುದಕ್ಕೆ ಅಧ್ಯಕ್ಷ ರವೀಂದ್ರ ನಾಯ್ಕ ಚರ್ಚೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Share This
300x250 AD
300x250 AD
300x250 AD
Back to top