Slide
Slide
Slide
previous arrow
next arrow

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಶಾಸಕಿ ರೂಪಾಲಿ ವಿರೋಧ

300x250 AD

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ತೀವ್ರ ವಿರೋಧ ವ್ಯಕ್ತಪಡಿಸಿ, ಇದು ಜಾರಿಯಾದಲ್ಲಿ ಕ್ಷೇತ್ರದ ಜನತೆಯ ಬದುಕು ತುಂಬಾ ಕಷ್ಟಕರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕೇಂದ್ರ ಪರಿಸರ ಖಾತೆಯು ಹೊರಡಿಸಿದ ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಸ್ತೂರಿ ರಂಗನ್ ನೇತೃತ್ವದ ಸಮಿತಿ 2013 ರಲ್ಲಿ ತನ್ನ ವರದಿಯನ್ನು ಒಪ್ಪಿಸಿದೆ. ಆದರೆ ನನ್ನ ಕ್ಷೇತ್ರದಲ್ಲಿ ಸೀಬರ್ಡ್ ನೌಕಾನೆಲೆ ಯೋಜನೆ, ಕೈಗಾ ಅಣು ಸ್ಥಾವರ ಹಿಂದಿನಿಂದಲೂ ಇದ್ದು, ಈ ಯೋಜನೆಗಳಿರುವುದು ಕಸ್ತೂರಿರಂಗನ್ ಸಮಿತಿ ಕಡೆಗಣಿಸಿದೆ.ಅಣು ವಿದ್ಯುತ್ ಯೋಜನೆಯಲ್ಲಿ 5 ಹಾಗೂ 6ನೇ ಘಟಕದ ನಿರ್ಮಾಣ ಕಾಮಗಾರಿಯೂ ಆರಂಭವಾಗಿದೆ.ಚತುಷ್ಪಥ ರಸ್ತೆಯೂ ಆಗಿದೆ. ಇದೆಲ್ಲವನ್ನು ವರದಿಯಲ್ಲಿ ಹೇಳಲಾಗಿಲ್ಲ. ಅಂದರೆ ಸಮೀಕ್ಷೆಯನ್ನೇ ಸಮರ್ಪಕವಾಗಿ ಮಾಡಿಲ್ಲ ಎಂದು ಆಪಾದಿಸಿದರು. ಈ ವರದಿ ಅನೇಕ ಲೋಪದೋಷಗಳಿಂದ ಕೂಡಿದೆ. ಇದು ಅನುಷ್ಠಾನಕ್ಕೆ ಬಂದರೆ ಕಾರವಾರ-ಅಂಕೋಲಾ ತಾಲ್ಲೂಕಿನ ಜನರು ಮತ್ತೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಮೊದಲೆ ಅಭಿವೃದ್ಧಿಯಲ್ಲಿ ನನ್ನ ಕ್ಷೇತ್ರ ಹಿಂದುಳಿದಿದೆ. ಈ ವರದಿ ಜಾರಿಯಿಂದ ಅಭಿವೃದ್ಧಿ ಸ್ಥಗಿತವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಉತ್ತರಕನ್ನಡ ಜಿಲ್ಲೆಯ 600ಕ್ಕೂ ಅಧಿಕ ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿ ಕೇಂದ್ರ ಪರಿಸರ ಮಂತ್ರಾಲಯ ಕರಡು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಜಾರಿಯಾದಲ್ಲಿ ಜಿಲ್ಲೆಯಲ್ಲಿ ಯಾವುದೇ ಕೈಗಾರಿಕೆಗಳು ಬರಲು ಸಾಧ್ಯವಿಲ್ಲ. ರಸ್ತೆ, ಕಟ್ಟಡಗಳ ನಿರ್ಮಾಣಕ್ಕೂ ಪರವಾನಗಿ ಪಡೆಯುವ ಅನಿವಾರ್ಯತೆ ಎದುರಾಗಲಿದೆ. ಪರಿಸರ ಪ್ರವಾಸೋದ್ಯಮಕ್ಕೂ ಹಿನ್ನಡೆಯಾಗುವ ಸಾಧ್ಯತೆ ಇದೆ. ಕಾರವಾರ ತಾಲೂಕಿನ 36, ಅಂಕೋಲಾದ 43 ಗ್ರಾಮಗಳು ಸೇರಿವೆ ಎಂದು ತಿಳಿಸಿದರು.

300x250 AD

ಪ್ರಾಣಿ, ಪಕ್ಷಿ, ಮರಗಳಂತೆ ಮನುಷ್ಯನಿಗೂ ಜೀವನ ನಡೆಸಲು ಅವಕಾಶವಿರಬೇಕು. ಕಸ್ತೂರಿರಂಗನ್ ವರದಿ ಜಾರಿಯಾದರೆ ಕಾಡಿನಲ್ಲೇ ವಾಸಿಸುವ ಮಲೆನಾಡು ಮತ್ತು ಕರಾವಳಿಗರ ಬದುಕನ್ನೇ ಕಸಿದುಕೊಂಡಂತಾಗುತ್ತದೆ. ಈ ಬಗ್ಗೆ ಸಾರ್ವಜನಿಕರೂ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಶಾಸಕರು ಸಭೆಯ ಗಮನಕ್ಕೆ ತಂದರು.

ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಆರಗ ಜ್ಞಾನೇಂದ್ರ, ಎಸ್.ಅಂಗಾರ, ಆನಂದ ಸಿಂಗ್, ಶಿವರಾಮ ಹೆಬ್ಬಾರ,ಶಾಸಕರುಗಳು, ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Share This
300x250 AD
300x250 AD
300x250 AD
Back to top