Slide
Slide
Slide
previous arrow
next arrow

ರಸ್ತೆಗೆ ಡಾಂಬರೀಕರಣಕ್ಕೆ ಗ್ರಾಮಸ್ಥರ ಆಗ್ರಹ

300x250 AD

ಮುಂಡಗೋಡ: ಹದಗೆಟ್ಟಿರುವ ರಸ್ತೆ ಹಾಗೂ ರಸ್ತೆಯ ಅಲ್ಲಲ್ಲಿ ಬಿದ್ದಿರುವ ಗುಂಡಿಗಳಿಂದ ಸಾರ್ವಜನಿಕರಿಗೆ, ರೈತರಿಗೆ, ಕೂಲಿಕಾರರಿಗೆ ಹಾಗೂ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಡಾಂಬರ್ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಕೊಪ್ಪ ಹಾಗೂ ಇಂದೂರ ಭಾಗದ ಗ್ರಾಮಸ್ಥರು ಸಚಿವ ಶಿವರಾಮ ಹೆಬ್ಬಾರರಿಗೆ ಮನವಿ ಸಲ್ಲಿಸಿದ್ದಾರೆ.

ಕೊಪ್ಪ(ಇಂ) ಗ್ರಾಮದ ಶ್ರೀಮೈಲಾರಲಿಂಗೇಶ್ವರ ಶಿಬಿರದಿಂದ 3.ನಂ ಟಿಬೇಟ್ ಕ್ಯಾಂಪ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಗುಂಡಿಗಳು ಬಿದ್ದಿವೆ. ಕೃಷಿ ಚಟುವಟಿಕೆಗಳಿಗೆ ಕೊಪ್ಪ ಹಾಗೂ ಇಂದೂರ ಭಾಗದ ರೈತರು ಈ ರಸ್ತೆಯನ್ನೇ ಬಳಸುತ್ತಾರೆ. ಟಿಬೇಟಿಯನ್ ಕಾಲೋನಿಗೆ ಬ್ಯಾಂಕ್, ಅಂಚೆ ಕಚೇರಿ, ದಿನಗೂಲಿಗಾಗಿ ಗ್ರಾಮಸ್ಥರು ಇದೇ ರಸ್ತೆ ಅವಲಂಬಿತರಾಗಿದ್ದಾರೆ. ಹದಗೆಟ್ಟಿರುವ ರಸ್ತೆಯಿಂದ ಹೆಚ್ಚಿನ ಅಪಘಾತಗಳು ಸಂಭವಿಸಲು ಕಾರಣವಾಗಿದ್ದು, ಹೀಗಾಗಿ ಈ ರಸ್ತೆಗೆ ಡಾಂಬರೀಕರಣ ಮಾಡಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top