Slide
Slide
Slide
previous arrow
next arrow

ಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಸ್ಕರ ಮಡಿವಾಳ ಆಯ್ಕೆ

300x250 AD

ಸಿದ್ದಾಪುರ: ತಾಲ್ಲೂಕಿನ ಹಲಗೇರಿ ಕ್ಲಸ್ಟರ್ ಸಿ.ಆರ್.ಪಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ಮಡಿವಾಳ ಪ್ರಸ್ತುತ ಕರ್ನಾಟಕ ರಾಜ್ಯ ಶಿಕ್ಷಕ ಪರಿಷತ್ ನೀಡುವ ರಾಜ್ಯಮಟ್ಟದ ಶಿಕ್ಷಣ ಸಾರಥಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಭಾಸ್ಕರ ಮಡಿವಾಳ ಮೂಲತ: ಕುಮಟಾ ತಾಲ್ಲೂಕಿನವರು. ಇವರು ಪ್ರಾಥಮಿಕ ಶಿಕ್ಷಣವನ್ನು ಕುಮಟಾ ತಾಲ್ಲೂಕಿನ ಊರಕೇರಿಯಲ್ಲಿ ಹಾಗೂ ಪ್ರೌಢಶಿಕ್ಷಣ ವನ್ನು ಶ್ರೀರಾಮನಾಥ ಪ್ರೌಢಶಾಲೆ ಊರಕೇರಿಯಲ್ಲಿ ಮುಗಿಸಿದ್ದಾರೆ. 2007 ಫೆಬ್ರುವರಿಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ 3 ವರ್ಷ ಸೇವೆ, 2010ರಿಂದ ಶಿರಸಿ ಶೈಕ್ಷಣಿಕ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನಲ್ಲಿ ಸೇವೆ, 2020ರಿಂದ ಸಿದ್ದಾಪುರ ತಾಲ್ಲೂಕಿನ ಹಲಗೇರಿ ಕ್ಲಸ್ಟರ್ ಸಿಆರ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಸಿದ್ದಾಪುರ ಪ್ರಾಥಮಿಕ ಶಿಕ್ಷಕರ ಸಂಘ ಹಾಗೂ ತಾಲ್ಲೂಕಿನ ಸಮಸ್ತ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top