• Slide
    Slide
    Slide
    previous arrow
    next arrow
  • ಭಾಷಣ ಸ್ಪರ್ಧೆ:ನಂದಿನಿ ಸಾವಂತ ದ್ವಿತೀಯ ಸ್ಥಾನ

    300x250 AD

    ಕಾರವಾರ: ಇತ್ತೀಚಿಗೆ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸದಾಶಿವಗಡದ ಬಿಜಿವಿಎಸ್ ಕಾಲೇಜಿನ ಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ನಂದಿನಿ ಪ್ರಶಾಂತ ಸಾವಂತ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

    ಇತ್ತೀಚಿಗೆ ಶಿರಸಿಯ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಮತ್ತು ತೋಟಗಾರ್ಸ್ ಕೋ- ಆಪರೇಟಿವ್ ಸೇಲ್ ಸೊಸೈಟಿ (ಟಿಎಸ್‌ಎಸ್) ಸಂಯುಕ್ತ ಆಶ್ರಯದಲ್ಲಿ ದಿ.ಶ್ರೀಪಾದ ಹೆಗಡೆ ಕಡವೆ ಇವರ ಸ್ಮರಣಾರ್ಥ ‘ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಪಾತ್ರ’ ಎನ್ನುವ ವಿಷಯದ ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

    300x250 AD

    ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ನಂದಿನಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನವನ್ನು ವಿತರಿಸಲಾಯಿತು. ಈಕೆಯ ಸಾಧನೆಗೆ ಬಿಜಿವಿಎಸ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top