Slide
Slide
Slide
previous arrow
next arrow

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ

300x250 AD

ಶಿರಸಿ :  ಉತ್ತರ ಕನ್ನಡ  ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆಯಲ್ಲಿ  ನಗರದ  ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.  .

ಸಭೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ  ಅಧ್ಯಕ್ಷ ಶ್ರೀನಿವಾಸ ಬಿವಿ  ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್  ಆದೇಶದಂತೆಯುವ ಕಾಂಗ್ರೆಸ್ ನ ಕಾರ್ಯಕ್ರಮವಾದ  ಯುತ್ ಜೋಡೋ ಬೂತ್ ಜೋಡೋ  ಮತ್ತು ಯುವಧ್ವನಿ ಅಭಿಯಾನದ ಕುರಿತು ನಿರ್ದೇಶನಗಳನ್ನು ನೀಡಲಾಯಿತು.

300x250 AD

ನಂತರ ಮುಂದಿನ ದಿನದಲ್ಲಿ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲಾಯಿತು  ಹಾಗೂ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಲಾಯಿತು. ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉತ್ತರಕನ್ನಡ ಉಸ್ತುವಾರಿ ಮೆರಿಲ್ ರೇಗೋ,  ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಟಿ ನಾಯ್ಕ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಮುಂತಾದವರು ಇದ್ದರು. 

Share This
300x250 AD
300x250 AD
300x250 AD
Back to top