Slide
Slide
Slide
previous arrow
next arrow

ಆಕಸ್ಮಿಕ ಬೆಂಕಿ ತಗುಲಿ ಹೊತ್ತುರಿದ ಸಿಮೆಂಟ್ ಲಾರಿ

300x250 AD

ಯಲ್ಲಾಪುರ: ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಾರಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿಯ ಮೊಗದ್ದೆ ಸಮೀಪ ನಡೆದಿದೆ.

ಕೊಪ್ಪಳದಿಂದ ಅಂಕೋಲಾ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ, ಟೈರ್ ನ ಘರ್ಷಣೆಯಿಂದಾಗಿ ಬೆಂಕಿ ತಗುಲಿದೆ. ಚಾಲಕ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ.  ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಾರಿಯಲ್ಲಿದ್ದ ಸಿಮೆಂಟ್ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ಆರಿಸಲು ಯತ್ನಿಸಿದರಾದರೂ ಅಷ್ಟರಲ್ಲಾಗಲೇ ಲಾರಿ ಸುಟ್ಟು ಹೋಗಿತ್ತು

300x250 AD
Share This
300x250 AD
300x250 AD
300x250 AD
Back to top