• Slide
    Slide
    Slide
    previous arrow
    next arrow
  • ಜು.30ಕ್ಕೆ ಕಾನೂನು ಉಪನ್ಯಾಸ ಕಾರ್ಯಕ್ರಮ

    300x250 AD

    ಶಿರಸಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಅಧಿವಕ್ತಾ ಪರಿಷತ್ ಕರ್ನಾಟಕ ಉತ್ತರ ಕನ್ನಡ ಘಟಕ ಶಿರಸಿ ಹಾಗೂ ಕಾನೂನು ಮಹಾವಿದ್ಯಾಲಯ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಜು.30 ರಂದು ಮುಂಜಾನೆ 10-30 ಗಂಟೆಗೆ ಶಿರಸಿಯ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.


    ಕಾರ್ಯಕ್ರಮ ಉದ್ಘಾಟಕರಾಗಿ ಎಂ.ಇ. ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ಆಗಮಿಸಲಿದ್ದಾರೆ. “ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರಪಾತ್ರ” ಎಂಬ ವಿಷಯದ ಮೇಲೆ ಶಿರಸಿಯ ಹಿರಿಯ ವಕೀಲರಾದ ಜಿ.ಎ. ಹೆಗಡೆ ಕಾಗೇರಿ ಇವರು ಉಪನ್ಯಾಸಕರಾಗಿ ಆಗಮಿಸಲಿದ್ದಾರೆ. ಕಾಲೇಜಿನ ಉಪಸಮಿತಿಯ ಅಧ್ಯಕ್ಷ ಎಂ.ಪಿ. ಹೆಗಡೆ ಕೊಟ್ಟಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಎ.ಬಿ.ಎ.ಪಿ. ರಾಷ್ಟ್ರೀಯ ಪರಿಷತ್ ಸದಸ್ಯರಾದ ಹಾಗೂ ವಕೀಲರಾದ ಶ್ರೀಮತಿ ಸರಸ್ವತಿ ಹೆಗಡೆ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾನೂನು ಕಾಲೇಜಿನ ಪ್ರಾಚಾರ್ಯ ಅಶೋಕ ಭಟ್ಕಳ ಇವರು ಆಗಮಿಸಲಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top