• Slide
    Slide
    Slide
    previous arrow
    next arrow
  • ಜು.31ಕ್ಕೆ ಟಿ.ವಿ.ಕೋಮಾರರವರ ನಾಟಕಗಳ ಲೋಕಾರ್ಪಣೆ

    300x250 AD

    ಯಲ್ಲಾಪುರ; ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಮೈತ್ರಿ ಕಲಾ ಬಳಗ ತೇಲಂಗಾರ ಇವರ ಆಶ್ರಯದಲ್ಲಿ ಜು.31 ರಂದು ಮಧ್ಯಾಹ್ನ 3 ಘಂಟೆಗೆ ಪಟ್ಟಣದ ನಾಯಕನಕೆರೆ ಶಾರದಾಂಬಾ ಸಂಸ್ಕೃತ ಪಾಠಶಾಲಾ ಸಭಾಭವನದಲ್ಲಿ ನಾಟಕಕಾರ ಟಿ.ವಿ.ಕೋಮಾರ ಬಾಗಿನಕಟ್ಟಾ ಅವರ ಅದೃಷ್ಟದ ಮುಖ,ಬಿಳಿ ಆನೆ,ವಿಷ ಸರ್ಪದ ಸಂಚು ನಾಟಕಗಳ ಲೋಕಾರ್ಪಣೆ ನಡೆಯಲಿದೆ.

    ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ.ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಂತಕರಾದ ಪ್ರಮೋದ ಹೆಗಡೆ,ಕಶ್ಯಪ ಪರ್ಣಕುಟಿ,ಕಸಾಪ ತಾಲೂಕಾ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ,ಪತ್ರಕರ್ತ ಅಶೋಕ ಹಾಸ್ಯಗಾರ, ಟಿ.ಎಸ್.ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ಟಿ.ಎಂ.ಎಸ್‌ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ,ಕಳಚೆ ಸಹ್ಯಾದ್ರಿ ಸೇವಾ ಸಹಕಾರಿ ಅಧ್ಯಕ್ಷ ಉಮೇಶ ಭಾಗ್ವತ್,ಮೈತ್ರಿ ಕಲಾ ಬಳಗದ ಅಧ್ಯಕ್ಷ ಜಿ.ಎಸ್ .ಗಾಂವ್ಕಾರ ಮುಂತಾದವರು ಭಾಗವಹಿಸಲಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top