Slide
Slide
Slide
previous arrow
next arrow

ಇಂದು ಭಟ್ಕಳಕ್ಕೆ ಸಿಎಂ ಬೊಮ್ಮಾಯಿ, ಸಚಿವ ಅಶೋಕ್ ಭೇಟಿ

300x250 AD

ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ 4 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಭಟ್ಕಳ ತಾಲೂಕಿಗೆ ಇಂದು ಬುಧವಾರ ಭೇಟಿ ನೀಡಲಿದ್ದಾರೆ.

ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ ಅವರೂ ಅವರು ಜೊತೆಗೆ ಆಗಮಿಸಲಿದ್ದಾರೆ. ಭಟ್ಕಳದ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ಸಂಜೆ 6 ಗಂಟೆಗೆ ವಾಪಸಾಗಲಿದ್ದಾರೆ.

300x250 AD

ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭಟ್ಕಳದಲ್ಲಿ ಹಿಂದೆಂದೂ ಕಂಡರಿಯದಂಥ ಪ್ರವಾಹ ಉಂಟಾಗಿತ್ತು. ಒಮದೇ ದಿನದಲ್ಲಿ ದಾಖಲೆಯ 52 ಸೆಂ.ಮೀ ಮಳೆಯಾಗಿತ್ತು. ತಾಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ಹಾನಿಯಾಗಿದೆ. ಭಟ್ಕಳ ತಾಲೀಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿತ್ತು.

Share This
300x250 AD
300x250 AD
300x250 AD
Back to top