Slide
Slide
Slide
previous arrow
next arrow

ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮೇವು ಕಟಾವು ಯಂತ್ರ ವಿತರಣೆ

300x250 AD

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ವತಿಯಿಂದ ಕ.ಹಾ.ಮ ಬೆಂಗಳೂರು ಹಾಗೂ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಅನುದಾನದ ಅಡಿಯಲ್ಲಿ ನೀಡಲಾಗುವ 2 ಎಚ್.ಪಿ. ಸಿಂಗಲ್ ಫೆಸ್ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರವನ್ನು ಅ
ಆ.05, ಶುಕ್ರವಾರದಂದು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಅವರು ಶಿರಸಿ ತಾಲೂಕಿನ ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಿನವೊಂದಕ್ಕೆ ಸುಮಾರು 65 ಸಾವಿರ ಲೀಟರ್ ಹಾಲಿನ ಬೇಡಿಕೆ ಇದ್ದು, ಸದ್ಯ ನಮ್ಮಲ್ಲಿ 50 ಸಾವಿರ ಲೀಟರ್ ಹಾಲನ್ನಷ್ಟೇ ಉತ್ಪಾದಿಸಲಾಗುತ್ತಿದೆ ಇನ್ನುಳಿದ 15 ಸಾವಿರ ಲೀಟರ್ ನಷ್ಟು ಹಾಲನ್ನು ಬೇರೆಡೆಯಿಂದ ಖರೀದಿಸಿ ಪೂರೈಸುವಂತಾಗಿದ್ದು, ಇದನ್ನು ತಪ್ಪಿಸಲು ನಾವು ನಮ್ಮ ಜಿಲ್ಲೆಯಲ್ಲಿಯೇ ಇನ್ನೂ ಹೆಚ್ಚಿನ ಹಾಲನ್ನು ಉತ್ಪಾದಿಸುವಂತಾದಾಗ ಮಾತ್ರ ಹಾಲು ಉತ್ಪಾದಕರಿಗೆ ಇನ್ನೂ ಹೆಚ್ಚಿನ ದರವನ್ನು ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಶಂಕರ ಹೆಗಡೆ ಅವರು ಮಾತನಾಡಿ ಸಂಘಕ್ಕೆ ಮೇವು ಕತ್ತರಿಸುವ ಯಂತ್ರವನ್ನು ಪೂರೈಸಿದ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಅವರನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಇನ್ನೂ ಹೆಚ್ಚಿನ ಹಾಲು ಪೂರೈಸುವಂತಾಗುವಂತೆ ನಮ್ಮ ಭಾಗದ ಹಾಲು ಉತ್ಪಾದಕ ರೈತರು ಹೆಚ್ಚಿನ ಶ್ರಮವಹಿಸ ಬೇಕೆಂದರು.
ಈ ಸಂದರ್ಭದಲ್ಲಿ ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರುಗಳು, ಹಾಲು ಉತ್ಪಾದಕರು, ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಸೀತಾರಾಮ ವಿಷ್ಣು ಭಟ್, ಧಾರವಾಡ ಸಹಕಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯಾದ ಮೌನೇಶ ಎಂ ಸೋನಾರ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top