Slide
Slide
Slide
previous arrow
next arrow

ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ನಿಮಿತ್ತ ವಿವಿಧ ಸ್ಪರ್ಧೆ

300x250 AD

ಸಿದ್ದಾಪುರ: ತಾಲೂಕಿನ ಕಲ್ಲೂರಿನ ಸ ಹಿ ಪ್ರಾ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಕಾರ್ಯಕ್ರಮದ ನಿಮಿತ್ತ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ರಾಷ್ಟ್ರ ಧ್ವಜದ ಚಿತ್ರ ಬಿಡಿಸುವುದು, ಸ್ವಾತಂತ್ರ ಹೋರಾಟಗಾರರ ವೇಷಭೂಷಣ ಧರಿಸುವುದು, ದೇಶಭಕ್ತಿ ಗೀತೆ ಹಾಡುವುದು, ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಭಾಷಣ ಸ್ಪರ್ಧೆ, ಸ್ವತಂತ್ರ ಭಾರತದ ಅಭಿವೃದ್ಧಿ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಯಿತು.

300x250 AD

ನಿರ್ಣಾಯಕರಾಗಿ ಶಾಲಾ ಶಿಕ್ಷಕಿ ಗೀತಾ ಮೊಗೇರ್, ಪಲ್ಲವಿ ಖಾರ್ವಿ, ಭಾಸ್ಕರ ಮೊಗೇರ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಘೋಷಿಸಿ ಬಹುಮಾನಗಳನ್ನು ಆಗಸ್ಟ್ 15ರಂದು ಕೊಡಲಾಗುವುದೆಂದು ಶಾಲಾ ಮುಖ್ಯ ಶಿಕ್ಷಕ ಶ್ರೀಕಾಂತ ಬಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top